ಕೊಪ್ಪಳ : ಸಿಇಟಿ ಫಲಿತಾಂಶ ಪ್ರಕಟ ವಿಳಂಬ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಹುಟ್ಟಿಸಿದೆ. ಸರಕಾರ ಕೂಡಲೇ ಸಿಇಟಿ ಫಲಿತಾಂಶ ಪ್ರಕಟಿಸುವಂತೆ AIDSO ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಕಾಮೇಡ್-ಕೆ ಫಲಿತಾಂಶ ಬಂದರೂ ಸಿಇಟಿ ಫಲಿತಾಂಶ ಪ್ರಕಟವಾಗಿಲ್ಲ. ಸಿಇಟಿಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಸೇರಿಸಿದ್ದು ಕೂಡ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ ಉಂಟಾದ ಗೊಂದಲ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಮಸ್ಯೆ ಸೃಷ್ಟಿಸಿದೆ.
ಈ ಸಲ KEA ಸೃಷ್ಟಿಸಿದ ಸಮಸ್ಯೆಯಿಂದ ಶೈಕ್ಷಣಿಕ ವರ್ಷ ಆರಂಭಕ್ಕೆ ತಡವಾಗುತ್ತಿದೆ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಗಂಗರಾಜ ಅಳ್ಳಳ್ಳಿ ತಿಳಿಸಿದ್ದಾರೆ.