ಕೊಪ್ಪಳ : ಹೆಣ್ಣು ಮಕ್ಕಳಿಗೆ ಗ್ಯಾರಂಟಿ ಕೊಡುವ ರಾಜ್ಯ ಸರಕಾರ ಹೆಣ್ಣು ಭ್ರೂಣ ಹತ್ಯೆ ತಡೆಯುವ ಗ್ಯಾರಂಟಿ ನೀಡುತ್ತಿಲ್ಲ ಈ ವಿಷಯದಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಆಕ್ತೋಶ ವ್ಯಕ್ತಪಡಿಸಿದರು.
ರವಿವಾರ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಪರವಾನಗಿ ಇಲ್ಲದ ಎಷ್ಟೋ ಆಸ್ಪತ್ರೆಗಳಿವೆ. ರಾಜ್ಯದಲ್ಲಿ 4-5 ಸಾವಿರ ನಕಲಿ ವೈದ್ಯರಿದ್ದು ನಕಲಿ ವೈದ್ಯರು ದುರಾಸೆಯಿಂದ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದಾರೆ. ಇವರಿಗೆ ಕೆಲ ಪ್ರಭಾವಿಗಳ ಬೆಂಬಲವಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು ಸಿಐಡಿಗೆ ವಹಿಸಿದರೂ ಯಾವುದೇ ಪ್ರಗತಿ ಕಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿಕೆ ನೀಡಲು ಮಾತ ಸೀಮಿತಗೊಂಡಿದ್ದಾರೆ. ಎರಡು ವರ್ಷದಲ್ಲಿ 900 ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆಯಾಗಿವೆ. ಕೂಡಲೇ ಟಾಸ್ಕಫೋರ್ಸ್ ಗೆ ಹೆಚ್ಚಿನ ಅಧಿಕಾರ ಕೊಟ್ಟು ಅಂಥವರನ್ನು ಶಿಕ್ಷಿಸಬೇಕು.
ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಾನೂನು ಕ್ರಮ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯವೂ ನಡೆಯಬೇಕಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು ನವೀನಕುಮಾರ ಗುಳಗಣ್ಣವರ, ಮುಖಂಡರಾದ ಪ್ರಮೋದ, ಸೋಮಶೇಖರ ಗೌಡ, ರಾಜು ಬಾಕಳೆ ಉಪಸ್ಥಿತರಿದ್ದರು.