Advt. 
 Views   583
Jun 9 2024 7:44PM

ಕೊಪ್ಪಳ : ರಾಜ್ಯ ಸರಕಾರ ಒಪ್ಪಿದರೂ ಕೇಂದ್ರ ಸ್ಪಂದಿಸಿಲ್ಲ


ಕೊಪ್ಪಳ : ರಾಯಚೂರಿಗೆ ಏಮ್ಸ್ ಬೇಕು ಎಂಬ ಹೋರಾಟ ಇಂದಿಗೆ 759 ದಿನಕ್ಕೆ ಕಾಲಿಟ್ಟಿದ್ದು ನಮ್ಮ ಬೇಡಿಕೆಗೆ ಕೇಂದ್ರ ಸರಕಾರ ನಿರ್ಲಕ್ಷ್ತ ವಹಿಸಿದೆ ಎಂದು ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಡಾ. ಬಸವರಾಜ ಕಳಸ ಹೇಳಿದರು.

ರವಿವಾರ ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿದ ಅವರು 1956 ರಲ್ಲಿ ಜವಾಹರಲಾಲ್ ನೆಹರು ಮೊದಲು ಏಮ್ಸ್  ಆರಂಭಿಸಿದ್ರು . ಇಂದು ದೇಶದಲ್ಲಿ 24 ಏಮ್ಸ್ ಇವೆ. ನಂಜುಂಡಪ್ಪ ವರದಿಯಂತೆ ರಾಯಚೂರು ಜಿಲ್ಲೆ ಶಿಕ್ಷಣ ಉದ್ಯೋಗದಲ್ಲಿ ಹಿಂದುಳಿದಿದೆ. ಹಾಗಾಗಿ ರಾಯಚೂರಿಗೆ ಏಮ್ಸ್ ಬೇಕು. ರಾಯಚೂರಿಗೆ ಏಮ್ಸ್ ದೊರೆತರೆ ಕಲ್ಯಾಣ ಕರ್ನಾಟಕಕ್ಕೆ ದೊರೆತಂತೆ. 

250 ಎಕರೆ ಪ್ರದೇಶದ ಏಮ್ಸ್ ನಲ್ಲಿ 19 ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಇರುತ್ತವೆ. ಇದರಿಂದ ನಮ್ಮ ಭಾಗಕ್ಕೆ ಉತ್ತಮ ವೈದ್ಯಕೀಯ ಶಿಕ್ಷಣ , 50 ಸಾವಿರದಷ್ಟು ವೈದ್ಯಕೀಯ ಉದ್ಯೋಗ, ವೈದ್ಯಕೀಯ ಚಿಕಿತ್ಸೆ ದೊರೆಯುತ್ತದೆ. 

ಆದರೆ ಧಾರವಾಡ ಭಾಗದ ರಾಜಕಾರಣಿಗಳ ಹುನ್ನಾರದಿಂದ ನಮಗೆ ಏಮ್ಸ್ ದೊರೆಯುವಲ್ಲಿ ತಡವಾಗುತ್ತಿದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ರಾಜ್ಯ ಸರಕಾರ ಒಪ್ಪಿದರೂ ಕೇಂದ್ರ ಸರಕಾರ ನಿರ್ಲಕ್ಷ್ಯ ತೋರುತ್ತಿದೆ.  ಕಲ್ಯಾಣ ಕರ್ನಾಟಕದ ರಾಜಕಾರಣಿಗಳು ಈ ಬಗ್ಗೆ ಮಾತನಾಡಲಿಲ್ಲ.  ನಮ್ಮ ಭಾಗದ ರಾಜಕಾರಣಿಗಳಲ್ಲಿ ಒಗ್ಗಟ್ಟಿಲ್ಲ. ನಮ್ಮ ಹೋರಾಟ ತೀವ್ರಗೊಳ್ಳಲು ಕೊಪ್ಪಳ ಜಿಲ್ಲೆಯ ಸಂಘ ಸಂಸ್ಥೆಗಳು, ಸಂಘಟನೆಗಳು ಬೆಂಬಲಿಸಿ ಕೈ ಜೋಡಿಸುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಸಹ ಸಂಚಾಲಕ ಅಶೋಕ ಕುಮಾರ್ ಜೈನ್, ಹೋರಾಟಗಾರರಾದ ರಮೇಶ ತುಪ್ಪದ, ಜಗದೀಶ ಪೂರತಿಪ್ಲಿ, ಮಲ್ಲಿಕಾರ್ಜುನ ಇತರರು ಉಪಸ್ಥಿತರಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 4 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ
Jul 2 2025 9:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕರೆಂಟ್ ಕನೆಕ್ಷನ್ ಕಟ್ ಮಾಡಲು ಹೋದವರು ಕರೆಂಟ್ ಬಿಲ್ ಕಟ್ಟಿದರು
Jul 1 2025 8:01AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಮಗಾರಿ ಗುತ್ತಿಗೆ ಹಿಟ್ನಾಳ್ ಕುಟುಂಬದ ಕಪಿಮುಷ್ಠಿಯಲ್ಲಿ : ಸಿವಿಸಿ
Jun 26 2025 11:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ ಇಂಜಿನಿಯರಿಂಗ್ ಕಾಲೇಜ್ ಕಳಪೆ ಕಾಮಗಾರಿ
Jun 25 2025 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಅಭಿವೃದ್ದಿ ಏಕೆ ಮಾಯವಾಗಿದೆ ?
Jun 24 2025 4:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಮ್ಮ ಊರಿನ ಹತ್ರ ಸಕ್ಕರೆ ಫ್ಯಾಕ್ಟರಿ ಬೇಡ
Jun 24 2025 3:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ವಸತಿ ಇಲಾಖೆಯಲ್ಲಿ ಲಂಚ ಆರೋಪ : ತನಿಖೆ ನಡೆಯಲಿ
Jun 23 2025 9:11AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಡಾ. ಬಸವರಾಜ ದಿಂಡೂರ ಅಭಿನಂದನಾ ಗ್ರಂಥ ಬಿಡುಗಡೆ
Jun 22 2025 1:35PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ತಪ್ಪಿದ ಭಾರಿ ಅನಾಹುತ
Jun 22 2025 9:25AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಖಬರಸ್ಥಾನ ಸ್ವಚ್ಚತೆ : ವಾಗ್ವಾದ





     
Copyright © 2021 Agni Divya News. All Rights Reserved.
Designed & Developed by We Make Digitize