Advt. 
 Views   626
Jul 1 2024 8:20AM

ಕೊಪ್ಪಳದಲ್ಲಿ ಅತಿವೇಗದಿಂದ ವಾಹನ ಚಾಲನೆ : ಕ್ರಮಕ್ಕೆ ಆಗ್ರಹ


ಕೊಪ್ಪಳ ನಗರದಲ್ಲಿ ವಾಹನಗಳು ಅತಿವೇಗವಾಗಿ ಚಾಲನೆ ಆಗುತ್ತಿದ್ದರೂ,  ನಗರದ ಹೊರವಲಯದಲ್ಲಿ ಬೈಪಾಸ್ ಇದ್ದರೂ ಬೃಹತ್ ವಾಹನಗಳು ನಗರದ ಮೂಲಕ ಸಂಚರಿಸಿದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ. ಅನಾಹುತಗಳು ಸಂಭವಿಸಿದರೆ ಅಧಿಕಾರಿಗಳೆ ಹೊಣೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷರಾದ ಕೆ.ಎಸ್.ಮೈಲಾರಪ್ಪ ವಕೀಲರು ಹೇಳಿದರು.

ರವಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆಡಳಿತ ವರ್ಗ ಜನರಪರ ಕೆಲಸ ಮಾಡುವುದು ಬಿಟ್ಟು ಜನಪ್ರತಿನಿಧಿಗಳ, ಶ್ರೀಮಂತರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. 

ಅತಿವೇಗದಿಂದ ವಾಹನ ಚಾಲನೆ ಮಾಡಿ ಅಮಾಯಕರ ಜೀವ ಹಾನಿಯಾದರೆ ಅವರನ್ನು ನಂಬಿದ ಕುಟುಂಬದ ಗತಿ ಏನು ? ಮಕ್ಕಳು ಶಾಲೆಗೆ ಹೋಗಿ ಬರುವುದು ಕಷ್ಟಕರವಾಗುತ್ತಿದೆ. RTO ಕಚೇರಿ ಅಧಿಕಾರಿಗಳು ಯಾವ ಕ್ರಮವನ್ನೂ ಜರುಗಿಸುತ್ತಿಲ್ಲ. ಕೊಪ್ಪಳದಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಇದ್ದೂ ಇಲ್ಲದಂತಾಗಿದೆ. ಕೇವಲ ಅಮಾಯಕರನ್ನು, ಶಾಲೆಗೆ ಮಕ್ಕಳನ್ನು ಬಿಡಲು ಹೋದವರನ್ನು , ಗೃಹಬಳಕೆ ಸಾಮಾನು ತರಲು ಹೋದವರ ವಾಹನಗಳಿಗೆ ದಂಡ ಹಾಕುತ್ತಿದ್ದು ಅತಿವೇಗ ವಾಹನ ಚಾಲನೆ ಮಾಡುವವರತ್ತ ಇವರು ಕಣ್ಣೆತ್ತಿ ನೋಡುವುದೂ ಇಲ್ಲ .

ಕೂಡಲೇ ಜಿಲ್ಲಾಡಳಿತ ಈ ಸಮಸ್ಯೆಯತ್ತ ಗಮನಹರಿಸಬೇಕು. ಜನಸಾಮಾನ್ಯರ ರಕ್ಷಣೆಗೆ ಮುಂದಾಗಬೇಕು. ಇಲ್ಲವಾದರೆ ಪ್ರತಿಭಟನೆ ಅನಿವಾರ್ಯ ಎಂದು ಮೈಲಾರಪ್ಪ ಹೇಳಿದರು.

ಈ ಸಂದರ್ಭದಲ್ಲಿ ಸಂಜೀವಮೂರ್ತಿ ಇತರರು ಉಪಸ್ಥಿತರಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 12 2025 9:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ರಾತ್ರಿ ಹೊಲಗಳಿಗೆ ಒಬ್ಬರೆ ಹೋಗಬೇಡಿ : ಅರಣ್ಯ ಇಲಾಖೆ
Jul 11 2025 8:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ರೈತನ ಮೇಲೆ ಕರಡಿ ದಾಳಿ
Jul 11 2025 8:03PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಿಂಧನೂರು ಹುಬ್ಬಳ್ಳಿ ಸಿಂಧನೂರು ಪ್ಯಾಸೆಂಜರ್ ರೈಲು ಹೊಸ ವೇಳಾಪಟ್ಟಿ
Jul 11 2025 7:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೊಸ ರೈಲು
Jul 11 2025 10:33AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಹೋಗಿದ್ದ ಪ್ರೇಮಿಗಳು ಮರಳಿ ಬಾರದ ಊರಿಗೆ ಹೊರಟರು
Jul 10 2025 8:47PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಕಾಲುವೆಗೆ ಜಿಗಿದ ಪ್ರೇಮಿಗಳು
Jul 9 2025 7:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗ್ರಾಮೀಣ ಅಂಚೆ ನೌಕರರಿಂದ ಕೊಪ್ಪಳದಲ್ಲಿ ಧರಣಿ
Jul 8 2025 9:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೆಚ್ಚು ಫಂಡ್ ತರುವ ಅನುಕೂಲ ಶತ್ರು ರಾಯರಡ್ಡಿ
Jul 8 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗಿನ ಹೆಲಿಕಾಪ್ಟರ್ ಗೆಳೆಯ ವಿರುದ್ದ ರಡ್ಡಿ ವಾಗ್ದಾಳಿ
Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ





     
Copyright © 2021 Agni Divya News. All Rights Reserved.
Designed & Developed by We Make Digitize