Advt. 
 Views   425
Jul 11 2024 10:17AM

ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ನ್ಯಾಯಾಲಯ ಸ್ಥಾಪಿಸಿ - CITU


ಕೊಪ್ಪಳ : ರಾಷ್ಡ್ರವ್ಯಾಪಿ ಬೇಡಿಕೆ ದಿನದ ಅಂಗವಾಗಿ CITU ಅಶೋಕ ಸರ್ಕಲ್ ನಲ್ಲಿ ಪ್ರತಿಭಟಿಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿತು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಕಾನೂನು, ಕಾರ್ಮಿಕ ಸೆಸ್ ಕಾನೂನು ಉಳಿಸಬೇಕು. ಮಂಡಳಿ ನಿಧಿ ಕಟ್ಟಡ ಕಾರ್ಮಿಕರ ಸೌಲಭ್ಯಗಳಿಗೆ ಬಳಸಬೇಕು. ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ನ್ಯಾಯಾಲಯ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ CITU ಅಶೋಕ ಸರ್ಕಲ್ ನಲ್ಲಿ ಪ್ರತಿಭಟಿಸಿತು.

ಕೈಗಾರಿಕಾ ವಿವಾದ ನಿರ್ದಿಷ್ಟ ಕಾಲಮಿತಿಯಲ್ಲಿ ಇತ್ಯರ್ಥಗೊಳ್ಳಲು ಕಾನೂನು ತಿದ್ದುಪಡಿ ಮಾಡಬೇಕು. ಅಂಗನವಾಡಿ ಬಿಸಿಊಟ ಆಶಾ ಕಾರ್ಯಕರ್ತೆಯತಿಗೆ ಕನಿಷ್ಠ 31 ಸಾವಿರ ಸಂಬಳ, ಕನಿಷ್ಠ 10 ಸಾವಿರ ಪೆನ್ಷನ್ ಕೊಡಬೇಕು.

ಕೆಲಸದ ಅವಧಿ ವಾರಕ್ಕೆ 36 ತಾಸು, ದಿನದ ಪಾಳಿ 6 ತಾಸಿಗೆ ಮಿತಿಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿ ಮಾಡಬೇಕು. ಗುತ್ತಿಗೆ ಕಾರ್ಮಿಕ ಪದ್ದತಿ ರದ್ದುಪಡಿಸಬೇಕು. ಸ್ಥಳೀಯ ಸಂಸ್ಥೆ , ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಗುತ್ತಿಗೆ ಮತ್ತು ತಾತ್ಕಾಲಿಕ ಕಾರ್ಮಿಕ ಸೇವೆ ಖಾಯಂಗೊಳಿಸಲು ತಮಿಳುನಾಡು, ಆಸ್ಸಾಂ ಮಾದರಿ ಕಾನೂನು ಜಾರಿ ತರಬೇಕು ಎಂಬುದು ಸೇರಿದಂತೆ 30 ಬೇಡಿಕೆಗಳೊಂದಿಗೆ ಪ್ರತಿಭಟಿಸಿ ಡಿಸಿ ಕಚೇರಿ ಮೂಲಕ ಮನವಿ ಸಲ್ಲಿಸಿದರು.

CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಸಿಂ ಸರದಾರ, ಪ್ರಾಂತ ರೈತ ಸಂಘದ ದೊಡ್ಡನಗೌಡ ಪಾಟೀಲ್, ಹನುಮಂತ ಗುರಿಕಾರ, ವಾಸಿಂ ಸಿದ್ನೆಕೊಪ್ಪ , ಮೀರಾಸಾಬ, ರಂಜಾನ್ ಸಾಬ, ಷಷ್ಮುಖಪ್ಪ , ಅಲ್ಲಾಬಿ , ಸಾವಿತ್ರಿ, ಹನುಮಪ್ಪ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Mar 25 2025 8:41PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗ್ಯಾರಂಟಿ ಸಮಿತಿಗಳನ್ನು ರದ್ದುಪಡಿಸಿ : KRS ಪಕ್ಷ ಆಗ್ರಹ
Mar 25 2025 5:52PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : OFC ಕೇಬಲ್ ಗಳಿಗೆ ಬೆಂಕಿ ಅವಘಡ
Mar 24 2025 9:34PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
Mar 24 2025 7:49PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಟ್ರಾಫಿಕ್ ಸಿಗ್ನಲ್ ಸರ್ಕಲ್ ನ ರಸ್ತೆಗಳಿಗೆ ನೆರಳಿನ ಪರದೆ ಹಾಕಿ
Mar 23 2025 2:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಮಸ್ಯೆಗಳಿಗೆ ದನಿಯಾದರೆ ಸಮ್ಮೇಳನಗಳಿಗೆ ಸಾರ್ಥಕತೆ : ಮಾಲಾ ಬಡಿಗೇರ
Mar 21 2025 10:38PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬೆಂಕಿ ಹೊತ್ತಿ ಮದುವೆ ಬಟ್ಟೆ ಬಂಗಾರ ಸಮೇತ ಮನೆ ಆಹುತಿ
Mar 21 2025 10:36PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬೆಂಕಿ ಹೊತ್ತಿ ಮದುವೆ ಬಟ್ಟೆ ಬಂಗಾರ ಸಮೇತ ಮನೆ ಆಹುತಿ
Mar 19 2025 10:38PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಧ್ವನಿ ಎತ್ತಿದವರಿಗೆ ಥ್ಯಾಂಕ್ಸ್ ಮೌನಿಗಳ ವಿರುದ್ದ ಆಕ್ರೋಶ
Mar 19 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮದ್ಯ ಜೂಜಾಟದ ಕೇಸಿಗೆ ಯಾರೂ ಜಮಾನತ್ ಕೊಡಲ್ಲ
Mar 19 2025 8:39AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸರಕಾರಕ್ಕೆ ಪತ್ರ ಬರೆದ ಹಾಲವರ್ತಿ ಗ್ರಾಮಸ್ಥರು





     
Copyright © 2021 Agni Divya News. All Rights Reserved.
Designed & Developed by We Make Digitize