Advt. 
 Views   528
Aug 28 2024 9:54AM

ಇಕ್ಬಾಲ್ ಅನ್ಸಾರಿ ಆಡಿಯೋ ಬಿಡುಗಡೆ


ಕೊಪ್ಪಳ : ಮೊನ್ನೆ ನಡೆದ ಗಂಗಾವತಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ ಎಂಬ ಗೊಂದಲ ಸಾರ್ವಜನಿಕರಲ್ಲಿದೆ. ಆವತ್ತು ಗಂಗಾವತಿಯಲ್ಲಿ ಗೆದ್ದಿದ್ದು ಕಾಂಗ್ರೆಸ್ ನವರು ಸಂಭ್ರಮಿಸಿದ್ದು ಬಿಜೆಪಿಯವರು. ಇದು ಮೇಲ್ನೋಟಕ್ಕೆ ಕಂಡಿದ್ದು.

ಈ ಬಗ್ಗೆ ಗಂಗಾವತಿಯ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಆಡಿಯೋ ಹೇಳಿಕೆ ಬಿಡುಗಡೆ ಮಾಡಿ  ನಗರಸಭೆಯಲ್ಲಿ ಬಿಜೆಪಿಯವರೇ ಕಾಂಗ್ರೆಸ್ ಸದಸ್ಯರನ್ನು ಅಧ್ಯಕ್ಷ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಈಗ ಅಧಿಕಾರಕ್ಕೆ ಏರಿದ ಅಧ್ಯಕ್ಷ  ಮೌಲಾಸಾಬ, ಉಪಾಧ್ಯಕ್ಷೆ ಪಾರ್ವತಮ್ಮ ಕಾಂಗ್ರೆಸ್ ಚಿನ್ಹೆಯಿಂದ ಆಯ್ಕೆಯಾದವರು. 
ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಗೆದ್ದು ಬಂದಿಲ್ಲ ಎಂದು ಆಡಿಯೋದಲ್ಲಿ ತಿಳಿಸಿದ್ದಾರೆ.

ಗಂಗಾವತಿ ನಗರಸಭೆ ಚುನಾವಣೆ ಸಂದರ್ಭದಲ್ಲಿ ನಾವು ರಾಜತಾಂತ್ರಿಕ ನೀತಿ ಅನುಸರಿಸಿದ್ದೇವೆ. ನಮ್ಮಿಂದ ದೂರವಾದವರನ್ನು ಅಧ್ಯಕ್ಷ ಉಪಾಧ್ಯಕ್ಷರನ್ನು ಮಾಡದಿದ್ದರೆ ನಮ್ಮ ಕಡೆಯಿಂದಲೂ ಆಯ್ಕೆಯಾಗುತ್ತಿದ್ದರು.

ರಡ್ಡಿ ವಿಧಾನಸಭಾ ಚುನಾವಣೆಯ ಮುನ್ನ ನಮ್ಮ 9 ಜನ ಸದಸ್ಯರನ್ನು ಹಣ ಕೊಟ್ಟು ಖರೀದಿಸಿದ್ದಾರೆ. ಅವರ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ ಎಂದಿರುವ ಅವರು ಗಂಗಾವತಿ ನಗರಸಭೆಯಲ್ಲಿ ಇರುವುದು ಕಾಂಗ್ರೆಸ್ ಅಧಿಕಾರ ಎಂದು ಅವರು ಆಡಿಯೋ ಮೂಲಕ ಪ್ರತಿ ಪಾದಿಸಿದ್ದಾರೆ.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 4 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ
Jul 2 2025 9:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕರೆಂಟ್ ಕನೆಕ್ಷನ್ ಕಟ್ ಮಾಡಲು ಹೋದವರು ಕರೆಂಟ್ ಬಿಲ್ ಕಟ್ಟಿದರು
Jul 1 2025 8:01AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಮಗಾರಿ ಗುತ್ತಿಗೆ ಹಿಟ್ನಾಳ್ ಕುಟುಂಬದ ಕಪಿಮುಷ್ಠಿಯಲ್ಲಿ : ಸಿವಿಸಿ
Jun 26 2025 11:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ ಇಂಜಿನಿಯರಿಂಗ್ ಕಾಲೇಜ್ ಕಳಪೆ ಕಾಮಗಾರಿ
Jun 25 2025 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಅಭಿವೃದ್ದಿ ಏಕೆ ಮಾಯವಾಗಿದೆ ?
Jun 24 2025 4:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಮ್ಮ ಊರಿನ ಹತ್ರ ಸಕ್ಕರೆ ಫ್ಯಾಕ್ಟರಿ ಬೇಡ
Jun 24 2025 3:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ವಸತಿ ಇಲಾಖೆಯಲ್ಲಿ ಲಂಚ ಆರೋಪ : ತನಿಖೆ ನಡೆಯಲಿ
Jun 23 2025 9:11AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಡಾ. ಬಸವರಾಜ ದಿಂಡೂರ ಅಭಿನಂದನಾ ಗ್ರಂಥ ಬಿಡುಗಡೆ
Jun 22 2025 1:35PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ತಪ್ಪಿದ ಭಾರಿ ಅನಾಹುತ
Jun 22 2025 9:25AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಖಬರಸ್ಥಾನ ಸ್ವಚ್ಚತೆ : ವಾಗ್ವಾದ





     
Copyright © 2021 Agni Divya News. All Rights Reserved.
Designed & Developed by We Make Digitize