Advt. 
 Views   430
Oct 11 2024 7:05PM

ಅಸುರಿ ಗುಣಗಳ ಸಂಹಾರ ದೈವಿ ಗುಣಗಳ ಧಾರಣೆಯೆ ದಸರಾ


ಕೊಪ್ಪಳ : ಮನುಷ್ಯ ತನ್ನೊಳಗಿನ ರಾಕ್ಷಸ ಪ್ರವೃತ್ತಿ ಸಂಹಾರ ಮಾಡಿಕೊಳ್ಳಲು ಒಂದೆರಡು ದಿನ ಸಾಲದು ಅದಕ್ಕೆ ನವ ದಿನಗಳ ಕಾಲ ಈ ಹಬ್ಬ ಆಚರಿಸುತ್ತೇವೆ.  ಶಿವನಿಂದ ಶಕ್ತಿ ಪಡೆದವರೇ ಈ ನವದುರ್ಗೆಯರು ಶಿವಶಕ್ತಿಯರು. ನಾವು ಕೂಡ ಅಸುರಿ ಗುಣಗಳ ಮೇಲೆ ವಿಜಯ ಸಾಧಿಸಿ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣುವುದೇ ನವರಾತ್ರಿ ಹಬ್ಬ ಆಚರಣೆ ಮುಖ್ಯ ಉದ್ದೇಶ ಎಂದು ಬ್ರಹ್ಮ ಕುಮಾರಿ ಯೋಗಿನಿ ಅಕ್ಕ ನುಡಿದರು.

 ಅವರು‌ ವಾಸವಿ ದೇವಸ್ಥಾನದಲ್ಲಿ ಆರ್ಯವೈಶ್ಯ ಸಮಾಜ ಏರ್ಪಡಿಸಿದ್ದ ನವರಾತ್ರಿ  ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. 

ಮನುಷ್ಯ ತನ್ನ  ಸಿಟ್ಟು, ದ್ವೇಷ, ಅಸೂಯೆ, ಅಹಂಕಾರಗಳನ್ನು   ಸಂಹರಿಸಿಕೊಂಡು ಶಾಂತಿ ಸಮಾಧಾನ ಹಸನ್ಮುಖತೆಯಂಥ ಗುಣ ಧಾರಣೆಯೂ ದಸರಾ ಆಚರಣೆ ಮುಖ್ಯ ಉದ್ದೇಶ ಎಂದ ಅವರು ದಸರಾ ಪ್ರಯುಕ್ತ "ಮನಶಾಂತಿಗಾಗಿ ಶಿವಧ್ಯಾನ ಶಿಬಿರ" ಪ್ರತಿದಿನ ಬೆಳಗ್ಗೆ ಮತ್ತು ಸಂಜೆ 7 ರಿಂದ 8 ವರೆಗೆ ಏರ್ಪಡಿಸಿದ್ದು ಲಾಭ ಪಡೆಯುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.

 ಈ ಸಂದರ್ಭದಲ್ಲಿ ಈಶ್ವರೀಯ ವಿಶ್ವ ವಿದ್ಯಾಲಯದ  "ಚೈತನ್ಯ ದೇವಿಯ ರೂಪಕ" ಜನರನ್ನು ಆಕರ್ಷಿಸಿತು. 

ವೇದಿಕೆಯಲ್ಲಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತ ಉಪಾಧ್ಯಕ್ಷರಾದ ನಾರಾಯಣ ಕುರುಗೋಡು ಕಾರ್ಯದರ್ಶಿ ಮಲ್ಲಿಕಾರ್ಜುನ್ ಜಾನೆಕಲ್, ಶಂಕರ್ ಜನಾದ್ರಿ ಮುಂತಾದವರು ಉಪಸ್ಥಿತರಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 15 2025 9:09PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಫ್ರಿ ಬಸ್ ಸಂಭ್ರಮದ ನಡುವೆ ಕೊಪ್ಪಳ ರಸ್ತೆಯ ದುಃಖಗಾಥೆ
Jul 15 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಕಾರ್ಮಿಕರ ಬೃಹತ್ ಪ್ರತಿಭಟನೆ
Jul 15 2025 9:06AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸ್ಮಶಾನ ಜಾಗ ಅಭಾವ : ರಸ್ತೆ ಪಕ್ಕ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದ ಗ್ರಾಮಸ್ಥರು
Jul 12 2025 10:48PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕರಡಿ ಪತ್ತೆಗಾಗಿ ಡ್ರೋನ್ ಬಳಕೆ
Jul 12 2025 9:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ರಾತ್ರಿ ಹೊಲಗಳಿಗೆ ಒಬ್ಬರೆ ಹೋಗಬೇಡಿ : ಅರಣ್ಯ ಇಲಾಖೆ
Jul 11 2025 8:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ರೈತನ ಮೇಲೆ ಕರಡಿ ದಾಳಿ
Jul 11 2025 8:03PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಿಂಧನೂರು ಹುಬ್ಬಳ್ಳಿ ಸಿಂಧನೂರು ಪ್ಯಾಸೆಂಜರ್ ರೈಲು ಹೊಸ ವೇಳಾಪಟ್ಟಿ
Jul 11 2025 7:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೊಸ ರೈಲು
Jul 11 2025 10:33AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಹೋಗಿದ್ದ ಪ್ರೇಮಿಗಳು ಮರಳಿ ಬಾರದ ಊರಿಗೆ ಹೊರಟರು
Jul 10 2025 8:47PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಕಾಲುವೆಗೆ ಜಿಗಿದ ಪ್ರೇಮಿಗಳು





     
Copyright © 2021 Agni Divya News. All Rights Reserved.
Designed & Developed by We Make Digitize