Advt. 
 Views   300
Jan 15 2025 9:55PM

ಭಕ್ತಿ ಸಂಭ್ರಮದಿಂದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ


ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸುಪ್ರಸಿದ್ಧ ಹಿಂದೂಸ್ಥಾನಿ ಗಾಯಕರು ಪದ್ಮಶ್ರೀ ಎಮ್. ವೆಂಕಟೇಶ್ ಕುಮಾರ್ ಚಾಲನೆ ನೀಡಿದರು.

ಪದ್ಮಶ್ರೀ ವೆಂಕಟೇಶ್ ಕುಮಾರ್ ಅವರು ಮೂಲತಃ ಬಳ್ಳಾರಿ ಜಿಲ್ಲೆಯವರು. ಇನ್ನು ಕೊಪ್ಪಳ ಹಾಗೂ ಶ್ರೀ ಗವಿಮಠಕ್ಕೆ ಹೆಮ್ಮೆ ಅಂದ್ರೆ ಪದ್ಮಶ್ರೀ ವೆಂಕಟೇಶ್ ಕುಮಾರ್ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ.

ಮಠದ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊರ್ವರು ದೇಶವೇ ಮೆಚ್ಚಿದ ಸಂಗೀತ ಸಾಧಕರಾಗಿರುವುದು ಕೊಪ್ಪಳಕ್ಕೆ ಹೆಮ್ಮೆ ತಂದಿದೆ.

ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮಾತನಾಡುತ್ತ ಶಾಲೆಯೇ ಇಲ್ಲದ ಹಳ್ಳಿಯಲ್ಲಿ ಹುಟ್ಟಿದ ವೆಂಕಟೇಶ್ ಕುಮಾರ್ ಅವರಿಗೆ ಇಂದು ಮೂರು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಿವೆ. 

ಕಡು ಬಡತನದಲ್ಲಿ ಹುಟ್ಟಿದ ವೆಂಕಟೇಶ್ ಕುಮಾರ್  ಪಂ. ಪುಟ್ಟರಾಜ ಗವಾಯಿಗಳವರ ಆಶ್ರಮದಲ್ಲಿ 12 ವರ್ಷದ ಸಂಗೀತ ಕಲಿಕೆಯ ಶುಲ್ಕ ನೂರು ರೂಪಾಯಿ ಕೊಡದಷ್ಟು ಕಡುಬಡತನದ ವೆಂಕಟೇಶ್ ಕುಮಾರ್ ಇಂದು ಪಂ. ಭೀಮಸೇನ ಜೋಷಿಯವರ ನಂತರ ಕರ್ನಾಟ ಪ್ರತಿನಿಧಿಸಿದರೆ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಗಿದೆ.

ಜೇಬಿನಲ್ಲಿ ದುಡ್ಡು ಇದ್ದರೆ ನೂರು ಆಟ ಕಲಿಸುತ್ತದೆ. ಆದರೆ ಜೇಬು ಖಾಲಿ ಇದ್ದರೆ ನೂರು ಪಾಠ ಕಲಿಸುತ್ತದೆ ಅನ್ನೊದಕ್ಕೆ ಇವರು ಸಾಕ್ಷಿ ಎಂದು ಹೇಳಿದರು.

ಶ್ರಿ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ವಿಜಯಪುರದ ಅಭಿನವ ಶ್ರೀ ಸಿದ್ದಾರೂಡ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು.  

ಖ್ಯಾತ ಚಲನಚಿತ್ರ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ ಆಗಮಿಸಿದ್ದರು. ಕೊಪ್ಪಳ ರಾಯಚೂರು ಜಿಲ್ಲೆಯ ಜನಪ್ರತಿನುಧಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 12 2025 9:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ರಾತ್ರಿ ಹೊಲಗಳಿಗೆ ಒಬ್ಬರೆ ಹೋಗಬೇಡಿ : ಅರಣ್ಯ ಇಲಾಖೆ
Jul 11 2025 8:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ರೈತನ ಮೇಲೆ ಕರಡಿ ದಾಳಿ
Jul 11 2025 8:03PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಿಂಧನೂರು ಹುಬ್ಬಳ್ಳಿ ಸಿಂಧನೂರು ಪ್ಯಾಸೆಂಜರ್ ರೈಲು ಹೊಸ ವೇಳಾಪಟ್ಟಿ
Jul 11 2025 7:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೊಸ ರೈಲು
Jul 11 2025 10:33AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಹೋಗಿದ್ದ ಪ್ರೇಮಿಗಳು ಮರಳಿ ಬಾರದ ಊರಿಗೆ ಹೊರಟರು
Jul 10 2025 8:47PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಕಾಲುವೆಗೆ ಜಿಗಿದ ಪ್ರೇಮಿಗಳು
Jul 9 2025 7:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗ್ರಾಮೀಣ ಅಂಚೆ ನೌಕರರಿಂದ ಕೊಪ್ಪಳದಲ್ಲಿ ಧರಣಿ
Jul 8 2025 9:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೆಚ್ಚು ಫಂಡ್ ತರುವ ಅನುಕೂಲ ಶತ್ರು ರಾಯರಡ್ಡಿ
Jul 8 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗಿನ ಹೆಲಿಕಾಪ್ಟರ್ ಗೆಳೆಯ ವಿರುದ್ದ ರಡ್ಡಿ ವಾಗ್ದಾಳಿ
Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ





     
Copyright © 2021 Agni Divya News. All Rights Reserved.
Designed & Developed by We Make Digitize