Advt. 
 Views   168
Jan 23 2025 11:05AM

ಜ.27 ವಿಧಾನಸೌಧ ಮುಂದೆ ಕನ್ನಡ ತಾಯಿ ಭುವಮೇಶ್ವರಿ ಪ್ರತಿಮೆ ಅನಾವರಣ


ಕೊಪ್ಪಳ : ಇದೇ ತಿಂಗಳು ಜ. 27 ರಂದು ವಿಧಾನಸೌಧದ ಮುಂದೆ ತಾಯಿ ಭುವನೇಶ್ವರಿ ದೇವಿ ಪ್ರತಿಮೆ ಅನಾವರಣ ಸಂಭ್ರಮದಿಂದ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಹೇಳಿದರು.

ಬುಧವಾರ ಕೊಪ್ಪಳದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ  ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು ನಾನು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಆಗಿರುವ ಸಂದರ್ಭ ತಾಯಿ ಭುವನೇಶ್ವರಿ ಪ್ರತಿಮೆ ಅನಾವರಣ ಆಗುತ್ತಿರುವುದು ನನ್ನ ಅದೃಷ್ಟ ಇದು  ಖುಷಿ ತಂದಿದೆ.

ನನ್ನದೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯ್ಕೆ ಮಾಡುವ ರಾಜ್ಯೋತ್ಸವ ಪ್ರಶಸ್ತಿ , ಅಕಾಡೆಮಿಯ ಪ್ರಶಸ್ತಿಗಳಿಗೆ ಆಯ್ಕೆ ಸಂದರ್ಭ ನಾನು ಭಾಗವಹಿಸುವುದಿಲ್ಲ. ಯಾರ ಹೆಸರನ್ನು ಶಿಫಾರಸ್ಸು ಮಾಡುವುದಿಲ್ಲ. ಪಾರದರ್ಶಕವಾಗಿ ಅರ್ಹರನ್ನು ಆಯ್ಕೆ ಮಾಡಿ ಎಂದು ನಾನು ದೂರ ಇರುತ್ತೇನೆ.

ಹಿಂದಿನ ಸರ್ಕಾರ ಅಕಾಡೆಮಿಗಳಿಗೆ ಅಧ್ಯಕ್ಷರು ಸದಸ್ಯರನ್ನು ನೇಮಕ ಮಾಡಲಿಲ್ಲ ಪ್ರಶಸ್ತಿ ಸಮಾರಂಭಗಳನ್ನು ಮಾಡಲಿಲ್ಲ. ಈಗ ನಮ್ಮ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಅಕಾಡೆಮಿ ಪ್ರಾಧಿಕಾರಗಳಿಗೆ ಅಧ್ಯಕ್ಷರು ಸದಸ್ಯರ ನೇಮಕ ಮಾಡಿದ್ದೇವೆ. ಈ ಹಿಂದೆ 2013 ರಿಂದ 2018 ರವರೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ಅಕಾಡೆಮಿಗಳಿಗೆ 1 ಕೋಟಿ 10 ಲಕ್ಷ ರೂಪಾಯಿ ಅನುದಾನ ಕೊಟ್ಟಿದ್ದರು.. 

ನಂತರ ಬಂದ ಸರ್ಕಾರ ಅನುದಾನವನ್ನು 60 ಲಕ್ಷಕ್ಕೆ ಇಳಿಸಿದರು.  ಈಗ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅಕಾಡೆಮಿಗಳಿಗೆ 80 ಲಕ್ಷ ರೂಪಾಯಿ ಕೊಡ್ತಾ ಇದ್ದಾರೆ. ವಿಶೇಷ ಕಾರ್ಯಕ್ರಮಗಳನ್ನು ಮಾಡಿದರೆ ವಿಶೇಷ ಅನುದಾನ ಬಿಡುಗಡೆ ಮಾಡುತ್ತೇವೆ

 ಹಿಂದೆಲ್ಲ ರಾಜ್ಯೋತ್ಸವ ಪ್ರಶಸ್ತಿ ಅಕಾಡೆಮಿ ಅಧ್ಯಕ್ಷತೆ ಸದಸ್ಯತ್ವಗಳು  ಉತ್ತರ ಕರ್ನಾಟಕ ಭಾಗಕ್ಕೆ ನಿಲುಕದ ನಕ್ಷತ್ರಗಳಾಗಿದ್ದವು. ಈಗ ನಮ್ಮ ಅವಧಿಯಲ್ಲಿ ನಮ್ಮ ಭಾಗದವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಅರ್ಹತೆ ಆಧಾರದಲ್ಲಿ  ಪಾರದರ್ಶಕವಾಗಿ ಪ್ರಶಸ್ತಿಗೆ ಆಯ್ಕೆ ಮಾಡುತ್ತಿದ್ದೇವೆ ಎಂದು ಶಿವರಾಜ ತಂಗಡಗಿ ಹೇಳಿದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 8 2025 9:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೆಚ್ಚು ಫಂಡ್ ತರುವ ಅನುಕೂಲ ಶತ್ರು ರಾಯರಡ್ಡಿ
Jul 8 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗಿನ ಹೆಲಿಕಾಪ್ಟರ್ ಗೆಳೆಯ ವಿರುದ್ದ ರಡ್ಡಿ ವಾಗ್ದಾಳಿ
Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ
Jul 4 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ
Jul 2 2025 9:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕರೆಂಟ್ ಕನೆಕ್ಷನ್ ಕಟ್ ಮಾಡಲು ಹೋದವರು ಕರೆಂಟ್ ಬಿಲ್ ಕಟ್ಟಿದರು
Jul 1 2025 8:01AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಮಗಾರಿ ಗುತ್ತಿಗೆ ಹಿಟ್ನಾಳ್ ಕುಟುಂಬದ ಕಪಿಮುಷ್ಠಿಯಲ್ಲಿ : ಸಿವಿಸಿ
Jun 26 2025 11:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ ಇಂಜಿನಿಯರಿಂಗ್ ಕಾಲೇಜ್ ಕಳಪೆ ಕಾಮಗಾರಿ
Jun 25 2025 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಅಭಿವೃದ್ದಿ ಏಕೆ ಮಾಯವಾಗಿದೆ ?
Jun 24 2025 4:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಮ್ಮ ಊರಿನ ಹತ್ರ ಸಕ್ಕರೆ ಫ್ಯಾಕ್ಟರಿ ಬೇಡ
Jun 24 2025 3:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ವಸತಿ ಇಲಾಖೆಯಲ್ಲಿ ಲಂಚ ಆರೋಪ : ತನಿಖೆ ನಡೆಯಲಿ





     
Copyright © 2021 Agni Divya News. All Rights Reserved.
Designed & Developed by We Make Digitize