Advt. 
 Views   133
Feb 6 2025 8:47PM

ಕೊಪ್ಪಳ : ರೈತ ವಿರೋಧಿ ಮೂರು ಕಾಯ್ದೆ ವಾಪಸ್ ಪಡೆಯದ ರಾಜ್ಯ ಸರಕಾರ


ಕೊಪ್ಪಳ :  ರೈತರಿಗೆ ವಿರೋಧಿ  ಮೂರು ಕರಾಳ ಕಾಯ್ದೆ ಕೇಂದ್ರ ಸರಕಾರ ವಾಪಸ್ ಪಡೆದಿದ್ದರೂ ಆ ಕಾಯ್ದೆಯನ್ನು ರಾಜ್ಯದ ಸಿದ್ದರಾಮಯ್ಯ ಸರಕಾರ ಹಿಂಪಡೆದಿಲ್ಲ. ರಾಜ್ಯ ಸರಕಾರಕ್ಕೆ  ಇಚ್ಛಾಶಕ್ತಿ ಕೊರತೆ ಇದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್ . ಹಿರೇಮಠ ಹೇಳಿದರು.

ಗುರುವಾರ ಕೊಪ್ಪಳದಲ್ಲಿ ಮಾತನಾಡಿದ ಅವರು  ರಾಜ್ಯ ಸರಕಾರ ಜನಪರವಾಗಿಲ್ಲ.  ವಿಧಾನಸಭೆ ಚುನಾವಣೆ ಸಂದರ್ಭ ಅಧಿಕಾರಕ್ಕೆ ಬಂದರೆ ಮೂರು ಕರಾಳ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದರು. ನಂತರ ಲೋಕಸಭಾ ಚುನಾವಣೆ ಮುಗಿಯಲಿ ಎಂದರು ಈವರೆಗೆ ಕಾಯ್ದೆ ಹಿಂಪಡೆಯದ ಹಿನ್ನೆಲೆಯಲ್ಲಿ ಹೋರಾಟ ರೂಪಿಸುತ್ತೇವೆ ಎಂದರು.

ಕುಮಾರಸ್ವಾಮಿ ಕುಟುಂಬದವರು ಕೇತನಗಾನಹಳ್ಳಿಯ 71 ಎಕರೆ  ಗೋಮಾಳ ಭೂಮಿ ಕಬಳಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಅವರ ಚಿಕ್ಕಮ್ಮ. ಮಂಜುನಾಥ. ಬೀಗರಾದ ಡಿ ಸಿ ತಮ್ಮಣ್ಣ ಹಾಗು ಕುಟುಂಬದವರು ಕಬಳಿಸಿರುವ ಭೂಮಿ ಬಗ್ಗೆ  ಹೈಕೋರ್ಟ್ ನಲ್ಲಿ ಸಿವಿಲ್ ದಾವೆ ಹೂಡಲಾಗಿದೆ. ರಾಜ್ಯ ಸರಕಾರ ಹೈಕೋರ್ಟ್ ಗೆ ಸೂಕ್ತ ದಾಖಲೆ ಒದಗಿಸಿ ಹೆಚ್ ಡಿಕೆ ಕುಟುಂಬ ಕಬಳಿಸಿದ ಭೂಮಿ ಹಿಂಪಡೆಯಬೇಕು.

ಡಿ ಕೆ ಶಿವಕುಮಾರ  ಸಿಎಂ ಆಗಬಾರದು. ಅವರು  ಬೆನಗಾನಹಳ್ಳಿಯಲ್ಲಿ ಎಸ್ ಎಂ ಕೃಷ್ಣ ಸರಕಾರದ ಅವಧಿಯಲ್ಲಿ ನಗರಾಭಿವೃದ್ದಿ ಸಚಿವರಾಗಿ 4.20 ಎಕರೆ ಭೂಮಿ ಕಬಳಿಸಿದ್ದಾರೆ. ಯಡಿಯೂರಪ್ಪ ಸಿಎಂ ಆದಾಗ ಅದನ್ನು  ಡಿನೋಟಿಫೈ ಮಾಡಲಾಗಿದೆ. ಈ ಕುರಿತು ನಾಳೆ  ಫೆ. 7 ರಂದು  ಸುಪ್ರೀಂ ಕೋರ್ಟ್ ನಲ್ಲಿ ಹಿಯರಿಂಗ್ ಇದೆ. ಈಗ  ಭೂ ಕಬಳಿಕೆಯಲ್ಲಿ ಮೂರು ಪಕ್ಷದ ಮುಖಂಡರು ಒಂದಾಗಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ರಾಷ್ಟ್ರೀಯ ಅರಣ್ಯ ನೀತಿಗಾಗಿ ಹೋರಾಟ ಮಾಡಿದ್ದೇವು  ಈಗ ಜಾರಿಗೆ ಬಂದಿದೆ. ಅದು ಅನುಷ್ಠಾನಗೊಳ್ಳಬೇಕು. ರಾಜಕಾರಣಿಗಳಿಗೆ ದೇಶದ ಬಗ್ಗೆ ಕಾಳಜಿ ಇಲ್ಲ. ಅಧಿಕಾರದ ಬಗ್ಗೆ ಕಾಳಜಿ ಇದೆ ಎಂದು ಹಿರೇಮಠ ಹೇಳಿದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 12 2025 10:48PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕರಡಿ ಪತ್ತೆಗಾಗಿ ಡ್ರೋನ್ ಬಳಕೆ
Jul 12 2025 9:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ರಾತ್ರಿ ಹೊಲಗಳಿಗೆ ಒಬ್ಬರೆ ಹೋಗಬೇಡಿ : ಅರಣ್ಯ ಇಲಾಖೆ
Jul 11 2025 8:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ರೈತನ ಮೇಲೆ ಕರಡಿ ದಾಳಿ
Jul 11 2025 8:03PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಿಂಧನೂರು ಹುಬ್ಬಳ್ಳಿ ಸಿಂಧನೂರು ಪ್ಯಾಸೆಂಜರ್ ರೈಲು ಹೊಸ ವೇಳಾಪಟ್ಟಿ
Jul 11 2025 7:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೊಸ ರೈಲು
Jul 11 2025 10:33AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಹೋಗಿದ್ದ ಪ್ರೇಮಿಗಳು ಮರಳಿ ಬಾರದ ಊರಿಗೆ ಹೊರಟರು
Jul 10 2025 8:47PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಕಾಲುವೆಗೆ ಜಿಗಿದ ಪ್ರೇಮಿಗಳು
Jul 9 2025 7:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗ್ರಾಮೀಣ ಅಂಚೆ ನೌಕರರಿಂದ ಕೊಪ್ಪಳದಲ್ಲಿ ಧರಣಿ
Jul 8 2025 9:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೆಚ್ಚು ಫಂಡ್ ತರುವ ಅನುಕೂಲ ಶತ್ರು ರಾಯರಡ್ಡಿ
Jul 8 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗಿನ ಹೆಲಿಕಾಪ್ಟರ್ ಗೆಳೆಯ ವಿರುದ್ದ ರಡ್ಡಿ ವಾಗ್ದಾಳಿ





     
Copyright © 2021 Agni Divya News. All Rights Reserved.
Designed & Developed by We Make Digitize