Advt. 
 Views   184
Feb 8 2025 8:53PM

ದೆಹಲಿ ಸ್ಥಿತಿ ಕರ್ನಾಟಕ ಕಾಂಗ್ರೆಸ್ ಗೂ ಬರಲಿದೆ : ಡಾ. ಬಸವರಾಜ


ಕೊಪ್ಪಳ : ಭ್ರಷ್ಟಾಚಾರದಲ್ಲಿ ಸಿಲುಕಿ ಜೈಲುಪಾಲಾದರೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡದೆ ಅಧಿಕಾರದಲ್ಲಿ ಮುಂದುವರೆದಿದ್ದ ಭ್ರಷ್ಟ ರಾಜಕಾರಣಿ ಅರವಿಂದ್ ಕೇಜ್ರಿವಾಲ್ ಎಂದು ಬಿಜೆಪಿ ಮುಖಂಡ ಡಾ. ಬಸವರಾಜ ಕ್ಯಾವಟರ್ ಹೇಳಿದರು.

ಶನಿವಾರ ಸಂಜೆ ಅಶೋಕ ವೃತ್ತದಲ್ಲಿ ನಡೆದ ದೆಹಲಿ ಗೆಲುವಿನ ವಿಜಯೋತ್ಸವ ಆಚರಣೆಯಲ್ಲಿ ಅವರು ಮಾತನಾಡಿದರು.

ದೆಹಲಿಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ. ಕಾಂಗ್ರೆಸ್ ಇಲ್ಲಿ ಗ್ಯಾರಂಟಿ ಹೆಸರಿನಲ್ಲಿ ಪಂಗನಾಮ ಹಾಕುತ್ತಿದ್ದು ಅದೇ ರೀತಿ ಆಮಿಷಗಳನ್ನು ಒಡ್ಡಿ ದೆಹಲಿಯಲ್ಲಿ ಅಧಿಕಾರಕ್ಕೆ ಬರಲು ಪ್ರಯತ್ನಿಸಿತು.  ಆದರೆ ಕಾಂಗ್ರೆಸ್ ದೆಹಲಿಯಲ್ಲಿ ಒಂದೂ ಸ್ಥಾನ ಗೆದ್ದಿಲ್ಲ.  ಅಂತಹದ್ದೇ ಸ್ಥಿತಿ ಮುಂದೆ ಕಾಂಗ್ರೆಸ್ಸಿಗೆ ಕರ್ನಾಟಕದಲ್ಲಿ ಬರಲಿದೆ.  ಏಕೆಂದರೆ ಈಗ ರಾಜ್ಯ ಸರ್ಕಾರ ಭ್ರಷ್ಟಾಚಾರ  ಹಗರಣ ಒಳ ಜಗಳಗಳಲ್ಲಿ ಮುಳುಗಿ  ಒಂದು ಕೋಮನ್ನು ಓಲೈಸಿಕೊಳ್ಳಲು ಹೊರಟಿದೆ. ದೆಹಲಿ ಥರ  ಮುಂದೆ ಕರ್ನಾಟಕದಲ್ಲಿಯೂ ಬಿಜೆಪಿ  ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತದೆ.

2024 ರಿಂದ ಮೋದಿ ನೇತೃತ್ವದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಮಹಾರಾಷ್ಟ್ರ ಹರಿಯಾಣ ಈಗ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ಗೆದ್ದಿದೆ. ಮುಂದೆ ಪಂಜಾಬ ಬಿಹಾರದಲ್ಲಿಯೂ ಗೆದ್ದು  ಕರ್ನಾಟಕದಲ್ಲಿಯೂ ಬಿಜೆಪಿ ಗೆಲ್ಲುತ್ತದೆ ಎಂದು ಡಾ. ಬಸವರಾಜ ಹೇಳಿದರು 

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಬಸವರಾಜ ದಡೇಸೂಗುರು,  ಮುಖಂಡರಾದ ಮಹಾಂತೇಶ್ ಪಾಟೀಲ್  ವಿ.ಎಮ್. ಭೂಸನೂರಮಠ, ಆರ್‌.ಬಿ. ಪಾನಗಂಟಿ, ಚಂದ್ರಶೇಖರ ಗೌಡ ಹಲಗೇರಿ, ಮಹಾಲಕ್ಷ್ಮಿ ಕಂದಾರಿ ಇತರರು ಮಾತನಾಡಿದರು.

ಸುನೀಲ್ ಹೆಸರೂರ, ನೀಲಕಂಠಯ್ಯ ಹಿರೇಮಠ, ಮಲ್ಲಪ್ಪ ಡಿ , ಗಣೇಶ್ ಹೊರತಟ್ನಾಳ, ಪ್ರದೀಪ್ ಪಲ್ಲೇದ್,  ಸೋಮಣ್ಣ ಹಳ್ಳಿ, ಪ್ರಾಣೇಶ್ ಮಾದಿನೂರ್,  ದೇವರಾಜ್ ಹಾಲಸಮುದ್ರ, ಚನ್ನಬಸವ ಗಾಳಿ , ಪಂಪಯ್ಯ ಹಿರೇಮಠ,  ವಾಣಿಶ್ರೀ ಮಠದ, ಶೋಭಾ ನಗರಿ,  ರಾಧಾ ಕನಕಮೂರ್ತಿ ಸೇರಿದಂತೆ ಅನೇಕರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Mar 25 2025 8:41PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗ್ಯಾರಂಟಿ ಸಮಿತಿಗಳನ್ನು ರದ್ದುಪಡಿಸಿ : KRS ಪಕ್ಷ ಆಗ್ರಹ
Mar 25 2025 5:52PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : OFC ಕೇಬಲ್ ಗಳಿಗೆ ಬೆಂಕಿ ಅವಘಡ
Mar 24 2025 9:34PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
Mar 24 2025 7:49PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಟ್ರಾಫಿಕ್ ಸಿಗ್ನಲ್ ಸರ್ಕಲ್ ನ ರಸ್ತೆಗಳಿಗೆ ನೆರಳಿನ ಪರದೆ ಹಾಕಿ
Mar 23 2025 2:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಮಸ್ಯೆಗಳಿಗೆ ದನಿಯಾದರೆ ಸಮ್ಮೇಳನಗಳಿಗೆ ಸಾರ್ಥಕತೆ : ಮಾಲಾ ಬಡಿಗೇರ
Mar 21 2025 10:38PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬೆಂಕಿ ಹೊತ್ತಿ ಮದುವೆ ಬಟ್ಟೆ ಬಂಗಾರ ಸಮೇತ ಮನೆ ಆಹುತಿ
Mar 21 2025 10:36PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬೆಂಕಿ ಹೊತ್ತಿ ಮದುವೆ ಬಟ್ಟೆ ಬಂಗಾರ ಸಮೇತ ಮನೆ ಆಹುತಿ
Mar 19 2025 10:38PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಧ್ವನಿ ಎತ್ತಿದವರಿಗೆ ಥ್ಯಾಂಕ್ಸ್ ಮೌನಿಗಳ ವಿರುದ್ದ ಆಕ್ರೋಶ
Mar 19 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮದ್ಯ ಜೂಜಾಟದ ಕೇಸಿಗೆ ಯಾರೂ ಜಮಾನತ್ ಕೊಡಲ್ಲ
Mar 19 2025 8:39AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸರಕಾರಕ್ಕೆ ಪತ್ರ ಬರೆದ ಹಾಲವರ್ತಿ ಗ್ರಾಮಸ್ಥರು





     
Copyright © 2021 Agni Divya News. All Rights Reserved.
Designed & Developed by We Make Digitize