Advt. 
 Views   551

ಸಮಸ್ಯೆಗಳಿಗೆ ದನಿಯಾದರೆ ಸಮ್ಮೇಳನಗಳಿಗೆ ಸಾರ್ಥಕತೆ : ಮಾಲಾ ಬಡಿಗೇರ

Mar 23, 2025, 02:11 PM IST
ಸಮಸ್ಯೆಗಳಿಗೆ ದನಿಯಾದರೆ ಸಮ್ಮೇಳನಗಳಿಗೆ ಸಾರ್ಥಕತೆ : ಮಾಲಾ ಬಡಿಗೇರ

ಕೊಪ್ಪಳ : ಬರಿ ಇತಿಹಾಸ ಮೆಲುಕು ಹಾಕಿದರೆ ಸಾಲದು ಪ್ರಸ್ತುತ ಸಮಸ್ಯೆಗಳಿಗೆ ದನಿಯಾದರೆ ಸಮ್ಮೇಳನಗಳಿಗೆ ಸಾರ್ಥಕತೆ ದಕ್ಕುತ್ತದೆ ಎಂದು ತಾಲೂಕು 10 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಮಾಲಾ ಬಡಿಗೇರ ನುಡಿದರು.

ಸಮ್ಮೇಳನದ ಸರ್ವಾಧ್ಯಕ್ಷತೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ 22 ಕೈಗಾರಿಗಳು ಭಾರಿ ಪ್ರಮಾಣದ ಮಾಲಿನ್ಯ ಉಂಟು ಮಾಡುತ್ತಿವೆ. ಕಾರ್ಖಾನೆಗಳಿಂದ ಅನೇಕ ಗ್ರಾಮಗಳ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈಗ ಬಲ್ಡೋಟಾ ಕಾರ್ಖಾನೆ ಕೊಪ್ಪಳ ಪಕ್ಕದಲ್ಲಿ ಬೇಡ ಎಂದು ಹೋರಾಟ ನಡೆದರೂ ಸರಕಾರ ಕಾಮಗಾರಿ ತಡೆದಿಲ್ಲ. ಈ ಕಾರ್ಖಾನೆಯಿಂದ ಬಹಳ ಹಾನಿ ಆಗಲಿದೆ. ಕಾರ್ಖಾನೆ ಬೇರೆಡೆ ಸ್ಥಳಾಂತರಿಸಬೇಕು.

ಅಣುಸ್ಥಾವರ ಅಪಾಯಕಾರಿ ಯೋಜನೆ ಆಗಿದೆ. ಜಿಲ್ಲೆಯ ಜನ ಸಮುದಾಯದ ದೃಷ್ಟಿಯಿಂದ ಈ ಯೋಜನೆ ಕೈ ಬಿಡಬೇಕು. ಕೊಪ್ಪಳ ವಿವಿ ಮುಚ್ಚುವ  ಬದಲು ಅಗತ್ಯ ಸೌಲಭ್ಯ ಒದಗಿಸವೇಕು ಎಂದ ಅವರು ಈ ಬಾರಿಯ SSLC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಹಲಗೇರಿಯ ವಿದ್ಯಾರ್ಥಿನಿಗೆ 5 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಮಾಲಾ ಬಡಿಗೇರ ಘೋಷಿಸಿದರು.
--------------------
ದಿಕ್ಸೂಚಿ ಭಾಷಣ ಮಾಡಿದ ಶಾಸಕರು ರಾಘವೇಂದ್ರ ಹಿಟ್ನಾಳ ಮಾತನಾಡಿ ಕನ್ನಡ ಭಾಷೆ ಉಳಿದು ಬೆಳೆಯಲು ಕನ್ನಡ ಸಾಹಿತ್ಯ ಸಮ್ಮೇಳನ ಅವಶ್ಯ.‌ ಸಮ್ಮೇಳನಗಳಿಂದ ಸೌಹಾರ್ದ- ಸಂಸ್ಕೃತಿ ಬೆಳವಣಿಗೆ ಕಾರಣ ಆಗಲಿದೆ. ಕೊಪ್ಪಳ ಜಿಲ್ಲೆ ಸಾಹಿತ್ಯ ಸೇರಿದಂತೆ ವಿವಿಧ ರಂಗಕ್ಕೆ ಹಲವಾರು ಸಾಧಕರನ್ನು ನೀಡಿದೆ. ಕಸಾಪ ಮಾಜಿ ಜಿಲ್ಲಾಧ್ಯಕ್ಷರು ದಿ. ರಾಜಶೇಖರ ಅಂಗಡಿ ನೆನಪಿಗೆ ಹಲಗೇರಿಯಲ್ಲಿ ರಂಗಮಂದಿರ ನಿರ್ಮಾಣಕ್ಕೆ ಸಹಕಾರ ನೀಡುವೆ ಎಂದರು.
-------------------
ಪದ್ಮಶ್ರೀ ಭೀಮವ್ವ ಶಿಳ್ಳಿಕ್ಯಾತರ ಸಮ್ಮೇಳನ ಉದ್ಘಾಟಿಸಿದರು.
ವೇದಿಕೆಯಲ್ಲಿ ಸಿ.ವಿ.ಚಂದ್ರಶೇಖರ, ಡಾ. ಬಸವರಾಜ ಕ್ಯಾವಟರ್, ಮಂಜುಳಾ ಕರಡಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಹುಚ್ಚಮ್ಮ ಚೌದರಿ, ಶಂಭುಲಿಂಗನಗೌಡ ಹಲಗೇರಿ, ಮಂಜುನಾಥ ಮ್ಯಾಗಳಮನಿ,  ಎಸ್. ಬಾಲಚಂದ್ರನ್ ಹಲಗೇರಿ ಗ್ರಾ.ಪಂ‌. ಅಧ್ಯಕ್ಷರು ಯಲ್ಲಪ್ಪ ಓಜಿನಹಳ್ಳಿ, ಉಪಾಧ್ಯಕ್ಷರಾದ ವಿರುಪವ್ವ ಬೇಳೂರು ಇತರರು ಉಪಸ್ಥಿತರಿದ್ದರು.


ಸಂತೋಷ ದೇಶಪಾಂಡೆ ಸ್ವಾಗತಿಸಿದರು. ಪ್ರಾಸ್ತಾವಿಕ ರಾಮಚಂದ್ರಗೌಡ ಗೊಂಡಬಾಳ ಮಾತನಾಡಿದರು. ರಮೇಶ ತುಪ್ಪದ , ವೀರೇಶ ಕೊಪ್ಪಳ ನಿರೂಪಿಸಿದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Dec 11 2025 8:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಗರಸಭೆ ಚುನಾವಣೆಗೆ ಜೆಡಿಎಸ್ ತಯಾರಿ ?
Dec 10 2025 7:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಂತರ್ಜಾತಿ ವಿವಾಹ : ಎಸ್ಪಿ ಮೊರೆ ಹೋದ ಯುವಕ
Dec 9 2025 8:31PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಣಕ್ಕೆ ಬೇಡಿಕೆ : ದೂರು FIR
Dec 8 2025 7:12AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿ 10 : ಬೆಳಗಾವಿಯಲ್ಲಿ ಮೌನ ಪ್ರತಿಭಟನೆ
Dec 8 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರುದ್ದ ಧರಣಿಗೆ 39 ದಿನ : ಭಾದಿತ ಗ್ರಾಮದ ಮಹಿಳೆಯರು ಭಾಗಿ
Dec 8 2025 1:28AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಿವೆಡ್ಡಿಂಗ್ ಶೂಟ್ ನಂತರ ಅಪಘಾತದಲ್ಲಿ ಜೋಡಿ ಸಾವು
Dec 7 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸದನದಲ್ಲಿ ಮಾತನಾಡಿ ಇಲ್ಲ ರಾಜೀನಾಮೆ ನೀಡಿ
Dec 6 2025 6:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬೆಳೆದದ್ದು ಕಾರ್ಖಾನೆಗಳಿಂದ ಅಲ್ಲ : ಶ್ರೀನಿವಾಸ ಗುಪ್ತಾ
Dec 6 2025 5:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು ಸಾಗಾಟದವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ
Dec 5 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಅಶೋಕ ಸರ್ಕಲ್ : ಹಣ ದುರುಪಯೋಗ ತನಿಖೆ ?




Copyright © 2025 Agni Divya. All Rights Reserved.
Designed & Developed by We Make Digitize