Advt. 
 Views   1251
May 30 2025 8:54PM

ಕೊಪ್ಪಳ : ಜನೌಷಧಿ ಕೇಂದ್ರ ಸ್ಥಗಿತಕ್ಕೆ ಆದೇಶ : ಬಿಜೆಪಿ ಪ್ರತಿಭಟನೆ


ಕೊಪ್ಪಳ : ಸರಕಾರಿ ಆಸ್ಪತ್ತೆ ಆವರಣದಲ್ಲಿ ಇರುವ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿರುವ ರಾಜ್ಯ ಸರಕಾರದ ವಿರುದ್ದ ಇಂದು ಬಿಜೆಪಿ ಜಿಲ್ಲಾ ಘಟಕದಿಂದ ಜಿಲ್ಲಾಸ್ಪತ್ರೆ ಆವರಣದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಯಿತು.

ಜನೌಷಧಿ ಮಳಿಗೆಗಳಿಂದ ಕಡಿಮೆ ವೆಚ್ಚದಲ್ಲಿ ಔಷಧಿ ಖರೀದಿಸಬಹುದು. ಈ ಜನೌಷಧಿ ಮಳಿಗೆಗಳನ್ನು ಕೇಂದ್ರ ಸರಕಾರ ಆರಂಭಿಸಿದೆ.

ಜನೌಷಧಿ ಕೇಂದ್ತ ಮುಚ್ಚುವ ರಾಜ್ಯ ಸರಕಾರದ ಆದೇಶದಿಂದ ಬಡ ರೋಗಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗುತ್ತದೆ. ಇದು ಸಂಪೂರ್ಣ ಜನ ವಿರೋಧಿ ನಿರ್ಧಾರ. ಕಡಿಮೆ ಬೆಲೆಯಲ್ಲಿ ಉತ್ತಮ ಔಷಧಿ ಪಡೆಯುವ ಜನರ ಅವಕಾಶವನ್ನು ರಾಜ್ಯ ಸರಕಾರ ಕಿತ್ತುಕೊಳ್ಳುತ್ತಿದೆ.

ಮೋದಿ ಸರಕಾರದ ಯೋಜನೆಗಳ ವಿರುದ್ದ ರಾಜ್ಯ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಖಾಸಗಿ ಮೆಡಿಕಲ್ ಮಾಫಿಯಾಗೆ ಮಣಿದು ಜನೌಷಧಿ ಕೇಂದ್ರಗಳನ್ನು ರಾಜ್ಯ ಸರಕಾರ ಸ್ಥಗಿತಗೊಳಿಸುತ್ತಿದೆ ಇಂಥ ಹೀನ ರಾಜಕೀಯ ಕೈ ಬಿಡಬೇಕು. ಇಲ್ಲವಾದರೆ ತೀವ್ರಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತೆ ಎಂದು ಮುಖಂಡರು ಎಚ್ಚರಿಸಿದರು. 

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಸವರಾಜ ದಡೇಸೂಗುರು, ಡಾ. ಕೆ.ಜಿ. ಕುಲಕರ್ಣಿ, ಚಂದ್ರಶೇಖರಗೌಡ ಪಾಟೀಲ ಹಲಗೇರಿ, ಚಂದ್ರಶೇಖರ ಕವಲೂರು, ನಗರಸಭೆ ಸದಸ್ಯೆ ಕವಿತಾ ಬಸವರಾಜ ಗಾಳಿ, ಗಣೇಶ ಹೊರತಟ್ನಾಳ, ಶೋಭಾ ನಗರಿ, ಕೀರ್ತಿ ಪಾಟೀಲ್, ಮಹಾಲಕ್ಷ್ಮಿ ಕಂದಾರಿ, ಗೀತಾ ಮುತ್ತಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 11 2025 8:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ರೈತನ ಮೇಲೆ ಕರಡಿ ದಾಳಿ
Jul 11 2025 8:03PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಿಂಧನೂರು ಹುಬ್ಬಳ್ಳಿ ಸಿಂಧನೂರು ಪ್ಯಾಸೆಂಜರ್ ರೈಲು ಹೊಸ ವೇಳಾಪಟ್ಟಿ
Jul 11 2025 7:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೊಸ ರೈಲು
Jul 11 2025 10:33AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಹೋಗಿದ್ದ ಪ್ರೇಮಿಗಳು ಮರಳಿ ಬಾರದ ಊರಿಗೆ ಹೊರಟರು
Jul 10 2025 8:47PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಕಾಲುವೆಗೆ ಜಿಗಿದ ಪ್ರೇಮಿಗಳು
Jul 9 2025 7:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗ್ರಾಮೀಣ ಅಂಚೆ ನೌಕರರಿಂದ ಕೊಪ್ಪಳದಲ್ಲಿ ಧರಣಿ
Jul 8 2025 9:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೆಚ್ಚು ಫಂಡ್ ತರುವ ಅನುಕೂಲ ಶತ್ರು ರಾಯರಡ್ಡಿ
Jul 8 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗಿನ ಹೆಲಿಕಾಪ್ಟರ್ ಗೆಳೆಯ ವಿರುದ್ದ ರಡ್ಡಿ ವಾಗ್ದಾಳಿ
Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ
Jul 4 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ





     
Copyright © 2021 Agni Divya News. All Rights Reserved.
Designed & Developed by We Make Digitize