Advt. 
 Views   317

ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ

Jul 04, 2025, 08:57 PM IST
ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ

ಕೊಪ್ಪಳ: ತಾಲೂಕಿನ ಮುದ್ದಾಬಳ್ಳಿ-ಗೊಂಡಬಾಳ ಹತ್ತಿರ ಸಕ್ಕರೆ ಕಾರ್ಖಾನೆಗೆ ಎನ್‌ಒಸಿ ಕೊಡಬಾರದು ಹಾಗೂ  ಕೂಡಲೇ ಗ್ರಾಮ ಸಭೆ ನಡೆಸಿ ಸಾರ್ವಜನಿಕರ ಅಭಿಪ್ರಾಯ ಪಡೆಯುಬೇಕು ಎಂದು ಮುದ್ದಾಬಳ್ಳಿಯ ಜನ ಶುಕ್ರವಾರ ಗೊಂಡಬಾಳ ಗ್ರಾಪಂ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ. 

ಈ ಕಾರ್ಖಾನೆ  ನಮ್ಮೂರಿನಿಂದ ಅರ್ಧ ಕಿ.ಮೀ ದೂರದಲ್ಲಿ ತಳವೂರುತ್ತದೆ. ಇದರಿಂದ ಫಲವತ್ತಾದ ನೀರಾವರಿ ಭೂಮಿ ಮತ್ತು  ಪರಿಸರ ಹಾಳಾಗಲಿದೆ. ಕಾರ್ಖಾನೆ ಉದ್ದೇಶದ ಜಾಗದಲ್ಲಿ ಸರ್ಕಾರಿ ಪ್ರೌಢ ಶಾಲೆ ಮಂಜೂರಾಗಿದೆ ಹಾಗೂ  ಮೊರಾರ್ಜಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ಅನುಮೋದನೆ ನೀಡಿದೆ. 

ಈ ಕಾರ್ಖಾನೆ ಜಾಗದಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ 200 ಮೀ ದೂರದಲ್ಲಿದ್ದು ಕಾರ್ಖಾನೆ ಸ್ಥಾಪನೆಯಿಂದ ತುಂಗಭದ್ರ ನದಿ, ಬೋರ್ ವೆಲ್ ನೀರು ಮಾಲಿನ್ಯ ಆಗುತ್ತೆ. ಇದು ರೋಗರುಜಿನಕ್ಕೂ ಕಾರಣ ಆಗುವುದರಿಂದ 
ಕಾರ್ಖಾನೆಗೆ ಎನ್‌ಒಸಿ ಯಾವುದೇ ಕಾರಣಕ್ಕೂ ನೀಡಬಾರದು.

2023 ರಲ್ಲಿ ಪರಿಸರ ಇಲಾಖೆ ನಡೆಸಿದ ಅಹವಾಲು ಸಭೆಯಲ್ಲಿ ಇಲ್ಲಿ ಕಾರ್ಖಾನೆ ಬೇಡವೆ ಬೇಡ ಎಂದಿದ್ದೇವೆ. ಆದರೂ ಸರ್ಕಾರ ಮೆ. ಯುಕೆಇಎಮ್ ಅಗ್ರಿ ಇನ್ಪ್ರಾ ಲಿ ಕಂಪನಿಗೆ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡಿದೆ. ಕಂಪನಿ ಗ್ರಾಪಂಗೆ ಎನ್‌ಒಸಿಗಾಗಿ ಅರ್ಜಿ ಸಲ್ಲಿಸಿದೆ. ಕೂಡಲೇ ಮುದ್ದಾಬಳ್ಳಿಯಲ್ಲಿ ಗ್ರಾಮ ಸಭೆ ನಡೆಸಿ ಜನರ ಅಭಿಪ್ರಾಯ ಪಡೆಯಬೇಕು. ಗ್ರಾಪಂ ಜನರ ಹಿತ ಕಾಪಾಡಲು ಮುಂದಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಕಾರ್ಖಾನೆ ಸ್ಥಾಪನೆಗೆ ತಕರಾರನ್ನು ಪ್ರತ್ಯೇಕವಾಗಿಯೇ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನಗೌಡ್ರ ಪಾಟೀಲ್, ಶರಣಗೌಡ್ರ ಪಾಟೀಲ್, ಸಂಗಣ್ಣ ನಾಗರಳ್ಳಿ, ಸುರೇಶರಡ್ಡಿ ಮಾದಿನೂರು, ಸಣ್ಣ ಹನುಮಪ್ಪ ಹುಳ್ಳಿ, ಸುರೇಂದ್ರಗೌಡ್ರ ಪಾಟೀಲ್, ರಾಜೀವ್ ರಡ್ಡಿ ಮಾದಿನೂರು, ಈರಣ್ಣ ಮಾಳೆಕೊಪ್ಪ, ಪ್ರಕಾಶ ಹಾಲವರ್ತಿ, ಗವಿಸಿದ್ದನಗೌಡ ಪಾಟೀಲ್, ಮೈಲಾರಪ್ಪ ಗೊಂಡಬಾಳ, ಗ್ರಾಪಂ ಸದಸ್ಯರಾದ ಶೇಖರಯ್ಯ ಇನಾಮದಾರ್, ನಾಗರಾಜ ಜಿ, ಗವಿಸಿದ್ದಪ್ಪ ಕುಂಬಾರ ಸೇರಿದಂತೆ ಇತರರು ಇದ್ದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Dec 11 2025 8:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಗರಸಭೆ ಚುನಾವಣೆಗೆ ಜೆಡಿಎಸ್ ತಯಾರಿ ?
Dec 10 2025 7:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಂತರ್ಜಾತಿ ವಿವಾಹ : ಎಸ್ಪಿ ಮೊರೆ ಹೋದ ಯುವಕ
Dec 9 2025 8:31PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಣಕ್ಕೆ ಬೇಡಿಕೆ : ದೂರು FIR
Dec 8 2025 7:12AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿ 10 : ಬೆಳಗಾವಿಯಲ್ಲಿ ಮೌನ ಪ್ರತಿಭಟನೆ
Dec 8 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರುದ್ದ ಧರಣಿಗೆ 39 ದಿನ : ಭಾದಿತ ಗ್ರಾಮದ ಮಹಿಳೆಯರು ಭಾಗಿ
Dec 8 2025 1:28AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಿವೆಡ್ಡಿಂಗ್ ಶೂಟ್ ನಂತರ ಅಪಘಾತದಲ್ಲಿ ಜೋಡಿ ಸಾವು
Dec 7 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸದನದಲ್ಲಿ ಮಾತನಾಡಿ ಇಲ್ಲ ರಾಜೀನಾಮೆ ನೀಡಿ
Dec 6 2025 6:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬೆಳೆದದ್ದು ಕಾರ್ಖಾನೆಗಳಿಂದ ಅಲ್ಲ : ಶ್ರೀನಿವಾಸ ಗುಪ್ತಾ
Dec 6 2025 5:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು ಸಾಗಾಟದವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ
Dec 5 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಅಶೋಕ ಸರ್ಕಲ್ : ಹಣ ದುರುಪಯೋಗ ತನಿಖೆ ?




Copyright © 2025 Agni Divya. All Rights Reserved.
Designed & Developed by We Make Digitize