Advt. 
 Views   3710
Jun 22 2022 3:28PM

ಡಾ.ಮಹಾಂತೇಶ ಪಾಟೀಲ್ - ಮಮತಾ ಅರಸಿಕೆರೆಯವರು ಆಯ್ಕೆ


ಕೊಪ್ಪಳ : ನಾಡಕವಿ ಎಂದೇ ಖ್ಯಾತರಾಗಿದ್ದ  ಗವಿಸಿದ್ದ ಎನ್ ಬಳ್ಳಾರಿಯವರ ಸ್ಮರಣಾರ್ಥ ನೀಡಲಾಗುತ್ತಿರುವ ಕಾವ್ಯ ಪ್ರಶಸ್ತಿ ನಾಡಿನ ಎಲ್ಲೆಡೆ ಗಮನ ಸೆಳೆದಿದೆ. 

ಈ ಬಾರಿಯ 'ಗವಿಸಿದ್ಧ ಎನ್. ಬಳ್ಳಾರಿ - ಕಾವ್ಯ ಪ್ರಶಸ್ತಿ - 2022' - ಪ್ರಕಟವಾಗಿದ್ದು ರಾಜ್ಯಮಟ್ಟದಲ್ಲಿ ಪ್ರತಿ ವರ್ಷ ಕಾವ್ಯದ ಹಸ್ತಪ್ರತಿಗೆ ಕೊಡಮಾಡುವ 
'ಗವಿಸಿದ್ಧ ಎನ್. ಬಳ್ಳಾರಿ - ಕಾವ್ಯ ಪ್ರಶಸ್ತಿ' ಗೆ ದಾವಣಗೆರೆಯ ಡಾ. ಮಹಾಂತೇಶ ಪಾಟೀಲ್ ರ 
 'ಚಲಿಸುವ ಮೋಡಗಳು' ಮತ್ತು ಮಮತಾ ಅರಸೀಕೆರೆಯವರ 'ನೀರ ಮೇಲಿನ ಮುಳ್ಳು' ಹಸ್ತಪ್ರತಿಗಳಿಗೆ ಲಭಿಸಿದೆ.

ಈ ವರ್ಷ ಒಟ್ಟು 61 ಹಸ್ತಪ್ರತಿಗಳು ಬಂದಿದ್ದವು. ಇವುಗಳಲ್ಲಿ  -  10 ಹಸ್ತಪ್ರತಿಗಳು ಸೆಮಿಫೈನಲ್ ಸುತ್ತಿಗೆ ಮತ್ತು ನಂತರ 5 ಹಸ್ತಪ್ರತಿಗಳು ಕೊನೆಯ ಸುತ್ತಿಗೆ ಆಯ್ಕೆಯಾಗಿದ್ದವು.

ಹಿರಿಯ ಬಂಡಾಯ ಕವಿಗಳು, ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರ ಮತ್ತು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿಗಳಾದ ಎಚ್.ಎಸ್. ಪಾಟೀಲರು ಕೊನೆಯ ಸುತ್ತಿನ ತೀರ್ಪುಗಾರರಾಗಿದ್ದರು.

ಪ್ರಶಸ್ತಿಯು ತಲಾ ಆರು ಸಾವಿರ ರೂಪಾಯಿ ನಗದು ಮತ್ತು  ಫಲಕವನ್ನು ಒಳಗೊಂಡಿದೆ.

 ಪ್ರಶಸ್ತಿಯನ್ನು ಕೊಪ್ಪಳದಲ್ಲಿ ಅಕ್ಟೋಬರ್ 16, 2022 ರಂದು ನಡೆಯುವ 'ಗವಿಸಿದ್ಧ ಎನ್. ಬಳ್ಳಾರಿ - ಸಾಹಿತ್ಯೋತ್ಸವ'ದಲ್ಲಿ ವಿತರಿಸಲಾಗುವುದು ಎಂದು 'ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ'ಯ ಪರವಾಗಿ ಮಹೇಶ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jun 26 2025 11:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ ಇಂಜಿನಿಯರಿಂಗ್ ಕಾಲೇಜ್ ಕಳಪೆ ಕಾಮಗಾರಿ
Jun 25 2025 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಅಭಿವೃದ್ದಿ ಏಕೆ ಮಾಯವಾಗಿದೆ ?
Jun 24 2025 4:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಮ್ಮ ಊರಿನ ಹತ್ರ ಸಕ್ಕರೆ ಫ್ಯಾಕ್ಟರಿ ಬೇಡ
Jun 24 2025 3:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ವಸತಿ ಇಲಾಖೆಯಲ್ಲಿ ಲಂಚ ಆರೋಪ : ತನಿಖೆ ನಡೆಯಲಿ
Jun 23 2025 9:11AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಡಾ. ಬಸವರಾಜ ದಿಂಡೂರ ಅಭಿನಂದನಾ ಗ್ರಂಥ ಬಿಡುಗಡೆ
Jun 22 2025 1:35PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ತಪ್ಪಿದ ಭಾರಿ ಅನಾಹುತ
Jun 22 2025 9:25AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಖಬರಸ್ಥಾನ ಸ್ವಚ್ಚತೆ : ವಾಗ್ವಾದ
Jun 22 2025 9:17AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ SDPI ಸಂಸ್ಥಾಪನಾ ದಿನಾಚರಣೆ : ರಕ್ತದಾನ ಶಿಬಿರ
Jun 20 2025 12:02PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಚೈನ್ ಲಿಂಕ್ ಕಂಪನಿ ಸಿಬ್ಬಂದಿಯಿಂದ ಹಲ್ಲೆ : ದೂರು ದಾಖಲು
Jun 20 2025 11:33AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ





     
Copyright © 2021 Agni Divya News. All Rights Reserved.
Designed & Developed by We Make Digitize