Advt. 
 Views   1009
Mar 4 2025 1:52PM

ಕೂಡಲೇ ಕಾರ್ಖಾನೆ ಕಾಮಗಾರಿ ತಡೆಯಲು ಸಿಎಂ ಸೂಚನೆ


ಕೊಪ್ಪಳ ಹತ್ತಿರ ಉಕ್ಕಿನ ಕಾರ್ಖಾನೆಯ ಕಾಮಗಾರಿಗಳನ್ನು ಕೂಡಲೇ ನಿಲ್ಲಿಸಬೇಕು ಮತ್ತು ಜನರ ಅಭಿಪ್ರಾಯ ಬಗ್ಗೆ  ಸಮಗ್ರವಾಗಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳ ಜಿಲ್ಲಾಧಿಕಾರಿಗೆ ಫೋನ್ ಮೂಲಕ ಸೂಚನೆ ನೀಡಿದ್ದಾರೆ.

ಇಂದು (ಮಂಗಳವಾರ)  ಅವರನ್ನು ಭೇಟಿಯಾದ ಕೊಪ್ಪಳ ಜಿಲ್ಲೆಯ ಸರ್ವ ಪಕ್ಷಗಳ ನಿಯೋಗ ಭೇಟಿಯಾಗಿ ಕೊಪ್ಪಳ ಹತ್ತಿರ ಉಕ್ಕಿನ ಕಾರ್ಖಾನೆ ಆರಂಭದಿಂದ ಆಗುವ ಎಲ್ಲ ಅಪಾಯ ಮತ್ತು ತೊಂದರೆಗಳ ಬಗ್ಗೆ ಸಂಪೂರ್ಣ ವಿವರಿಸಿದಾಗ ಮುಖ್ಯಮಂತ್ರಿಗಳು ಕೂಡಲೇ ಜಿಲ್ಲಾಧಿಕಾರಿಗೆ ಕರೆ ಮಾಡಿ ಕಾರ್ಖಾನೆ ತಯಾರಿ ಕೆಲಸ ನಿಲ್ಲಿಸಲು ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಕೊಪ್ಪಳ ಜಿಪ್ಪಾಧಿಕಾರಿ ಮೂಲಕ ಸಮಗ್ರ ವರದಿ ಪಡೆಯುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ಸಿಎಂ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕೂಡ ಸರ್ವ ಪಕ್ಷದ ನಿಯೋಗದ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ. 

ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ನೇತೃತ್ವದ ನಿಯೋಗದಲ್ಲಿ ಕೊಪ ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ, ಎಂಎಲ್ ಸಿ ಹೇಮಲತಾ ನಾಯಕ, ಜೆಡಿಎಸ್ ಮುಖಂಡರಾದ ಸಿ.ವಿ.ಚಂದ್ರಶೇಖರ , ವೀರೇಶ ಮಹಾಂತಯ್ಯನಮಠ, ಬಿಜೆಪಿ ಮುಖಂಡರಾದ ಡಾ. ಬಸವರಾಜ ಕ್ಯಾವಟರ್ ಸೇರಿದಂತೆ ಜಿಲ್ಲೆಯ 20 ಕ್ಕೂ ಹೆಚ್ಚು ಹಾಲಿ ಮಾಜಿ ಜನಪ್ರತಿನಿಧಿಗಳು ನಿಯೋಗದಲ್ಲಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 11 2025 10:33AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಹೋಗಿದ್ದ ಪ್ರೇಮಿಗಳು ಮರಳಿ ಬಾರದ ಊರಿಗೆ ಹೊರಟರು
Jul 10 2025 8:47PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಕಾಲುವೆಗೆ ಜಿಗಿದ ಪ್ರೇಮಿಗಳು
Jul 9 2025 7:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗ್ರಾಮೀಣ ಅಂಚೆ ನೌಕರರಿಂದ ಕೊಪ್ಪಳದಲ್ಲಿ ಧರಣಿ
Jul 8 2025 9:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೆಚ್ಚು ಫಂಡ್ ತರುವ ಅನುಕೂಲ ಶತ್ರು ರಾಯರಡ್ಡಿ
Jul 8 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗಿನ ಹೆಲಿಕಾಪ್ಟರ್ ಗೆಳೆಯ ವಿರುದ್ದ ರಡ್ಡಿ ವಾಗ್ದಾಳಿ
Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ
Jul 4 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ
Jul 2 2025 9:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕರೆಂಟ್ ಕನೆಕ್ಷನ್ ಕಟ್ ಮಾಡಲು ಹೋದವರು ಕರೆಂಟ್ ಬಿಲ್ ಕಟ್ಟಿದರು
Jul 1 2025 8:01AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಮಗಾರಿ ಗುತ್ತಿಗೆ ಹಿಟ್ನಾಳ್ ಕುಟುಂಬದ ಕಪಿಮುಷ್ಠಿಯಲ್ಲಿ : ಸಿವಿಸಿ
Jun 26 2025 11:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ ಇಂಜಿನಿಯರಿಂಗ್ ಕಾಲೇಜ್ ಕಳಪೆ ಕಾಮಗಾರಿ





     
Copyright © 2021 Agni Divya News. All Rights Reserved.
Designed & Developed by We Make Digitize