Advt. 
 Views   984

ಕೊಪ್ಪಳ : ಬಲ್ಡೋಟಾ ಕಾರ್ಖಾನೆ ಗೇಟಿನ ಬ್ಯಾರಿಕೇಡ್ ಕಿತ್ತ ಮುಖಂಡರು

Mar 06, 2025, 07:35 PM IST
ಕೊಪ್ಪಳ : ಬಲ್ಡೋಟಾ ಕಾರ್ಖಾನೆ ಗೇಟಿನ ಬ್ಯಾರಿಕೇಡ್ ಕಿತ್ತ ಮುಖಂಡರು

ಕೊಪ್ಪಳ ಹತ್ತಿರ ಉಕ್ಕಿನ ಕಾರ್ಖಾನೆ ಬೇಡ ಎಂದು ಜಿಲ್ಲೆಯ ಸರ್ವ ಪಕ್ಷಗಳ ನಾಯಕರ ನಿಯೋಗ ಮುಖ್ಯಮಂತ್ರಿಗಳಿಗೆ ಭೇಟಿಯಾಗಿ ಮನವಿ ಸಲ್ಲಿಸಿದಾಗ ಸದ್ಯಕ್ಕೆ ಕಾರ್ಖಾನೆ ಕಾಮಗಾರಿ ನಿಲ್ಲಿಸಿ ಎಂದು ಮುಖ್ಯಮಂತ್ರಿಗಳು ಫೋನ್ ಮೂಲಕ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದರು.

 ಆದರೆ ನಿನ್ನೆ ಬುಧವಾರ ಕೂಡ ಕಾರ್ಖಾನೆಯಲ್ಲಿ ಕಾಮಗಾರಿ ಮುಂದುವರೆದಿತ್ತು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಭೇಟಿ ನೀಡಿದಾಗ ಕಾಮಗಾರಿ ನಡೆದದ್ದು ಕಂಡು ಬಂತು. 

ಗುರುವಾರ ಈ ಬಗ್ಗೆ ಮಾಧ್ಯಮಗಳ ವರದಿ ನಂತರ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕಾರ್ಖಾನೆ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಜಿಲ್ಲಾಡಳಿತ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಗುರುವಾರ ಮಧ್ಯಾಹ್ನದ ಹೊತ್ತಿಗೆ ಕೊಪ್ಪಳದ ದಲಿತ ಮುಖಂಡರು ಕಾರ್ಖಾನೆ  ಸ್ಥಳಕ್ಕೆ ಭೇಟಿ ನೀಡಿದರು. ಅಲ್ಲಿ ಕಾಮಗಾರಿ ಕಂಡುಬರಲಿಲ್ಲ. ಆದರೆ ಕಾರ್ಖಾನೆಯ ದ್ವಾರದ ಬಳಿ ಹಾಕಿದ ಬಿದಿರು ಮತ್ತು ಕಬ್ಬಿಣದ ಬ್ಯಾರಿಕೇಡ್ ಗಳನ್ನು ಕಿತ್ತು ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸರಕಾರದ ಸೂಚನೆಯಂತೆ ಕಾಮಗಾರಿ ನಿಂತಿದೆ ಹೀಗಾಗಿ ಕಾರ್ಖಾನೆ ಒಳಗಿರುವ ಬಸಾಪುರ ಕೆರೆಗೆ ಸಾರ್ವಜನಿಕರು ಮುಕ್ತ ಅವಕಾಶ ನೀಡಬೇಕು ಮತ್ತು ಕೆರೆಗೆ ನೀರು ಕುಡಿಸಲು ಜಾನುವಾರು,  ಕುರಿಗಳು ಬಂದು ಹೋಗಲು ಅವಕಾಶ ನೀಡಬೇಕು. ಯಾರಿಗೂ ಅಡೆತಡೆ ಮಾಡಬಾರದು ಎಂದು ಈ ಸಂದರ್ಭದಲ್ಲಿ ಮಲ್ಲು ಪೂಜಾರಿ ಸಿದ್ದು ಮಣ್ಣಿನವರ್ ಮೂಕಪ್ಪ ಬಸಾಪುರ ಯಂಕಪ್ಪ ಹೊಸಳ್ಳಿ ಯಲ್ಲಪ್ಪ ಮುದ್ಲಾಪುರ ಯುವ ಕಾಂಗ್ರೆಸ್ ನ ಸಂತೋಷ ಕುರಿ ಹಾಗೂ  ಇತರರು ಆಗ್ರಹಿಸಿದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Dec 11 2025 8:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಗರಸಭೆ ಚುನಾವಣೆಗೆ ಜೆಡಿಎಸ್ ತಯಾರಿ ?
Dec 10 2025 7:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಂತರ್ಜಾತಿ ವಿವಾಹ : ಎಸ್ಪಿ ಮೊರೆ ಹೋದ ಯುವಕ
Dec 9 2025 8:31PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಣಕ್ಕೆ ಬೇಡಿಕೆ : ದೂರು FIR
Dec 8 2025 7:12AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿ 10 : ಬೆಳಗಾವಿಯಲ್ಲಿ ಮೌನ ಪ್ರತಿಭಟನೆ
Dec 8 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರುದ್ದ ಧರಣಿಗೆ 39 ದಿನ : ಭಾದಿತ ಗ್ರಾಮದ ಮಹಿಳೆಯರು ಭಾಗಿ
Dec 8 2025 1:28AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಿವೆಡ್ಡಿಂಗ್ ಶೂಟ್ ನಂತರ ಅಪಘಾತದಲ್ಲಿ ಜೋಡಿ ಸಾವು
Dec 7 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸದನದಲ್ಲಿ ಮಾತನಾಡಿ ಇಲ್ಲ ರಾಜೀನಾಮೆ ನೀಡಿ
Dec 6 2025 6:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬೆಳೆದದ್ದು ಕಾರ್ಖಾನೆಗಳಿಂದ ಅಲ್ಲ : ಶ್ರೀನಿವಾಸ ಗುಪ್ತಾ
Dec 6 2025 5:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು ಸಾಗಾಟದವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ
Dec 5 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಅಶೋಕ ಸರ್ಕಲ್ : ಹಣ ದುರುಪಯೋಗ ತನಿಖೆ ?




Copyright © 2025 Agni Divya. All Rights Reserved.
Designed & Developed by We Make Digitize