Advt. 
 Views   325
Mar 23 2025 2:11PM

ಸಮಸ್ಯೆಗಳಿಗೆ ದನಿಯಾದರೆ ಸಮ್ಮೇಳನಗಳಿಗೆ ಸಾರ್ಥಕತೆ : ಮಾಲಾ ಬಡಿಗೇರ


ಕೊಪ್ಪಳ : ಬರಿ ಇತಿಹಾಸ ಮೆಲುಕು ಹಾಕಿದರೆ ಸಾಲದು ಪ್ರಸ್ತುತ ಸಮಸ್ಯೆಗಳಿಗೆ ದನಿಯಾದರೆ ಸಮ್ಮೇಳನಗಳಿಗೆ ಸಾರ್ಥಕತೆ ದಕ್ಕುತ್ತದೆ ಎಂದು ತಾಲೂಕು 10 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಮಾಲಾ ಬಡಿಗೇರ ನುಡಿದರು.

ಸಮ್ಮೇಳನದ ಸರ್ವಾಧ್ಯಕ್ಷತೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ 22 ಕೈಗಾರಿಗಳು ಭಾರಿ ಪ್ರಮಾಣದ ಮಾಲಿನ್ಯ ಉಂಟು ಮಾಡುತ್ತಿವೆ. ಕಾರ್ಖಾನೆಗಳಿಂದ ಅನೇಕ ಗ್ರಾಮಗಳ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈಗ ಬಲ್ಡೋಟಾ ಕಾರ್ಖಾನೆ ಕೊಪ್ಪಳ ಪಕ್ಕದಲ್ಲಿ ಬೇಡ ಎಂದು ಹೋರಾಟ ನಡೆದರೂ ಸರಕಾರ ಕಾಮಗಾರಿ ತಡೆದಿಲ್ಲ. ಈ ಕಾರ್ಖಾನೆಯಿಂದ ಬಹಳ ಹಾನಿ ಆಗಲಿದೆ. ಕಾರ್ಖಾನೆ ಬೇರೆಡೆ ಸ್ಥಳಾಂತರಿಸಬೇಕು.

ಅಣುಸ್ಥಾವರ ಅಪಾಯಕಾರಿ ಯೋಜನೆ ಆಗಿದೆ. ಜಿಲ್ಲೆಯ ಜನ ಸಮುದಾಯದ ದೃಷ್ಟಿಯಿಂದ ಈ ಯೋಜನೆ ಕೈ ಬಿಡಬೇಕು. ಕೊಪ್ಪಳ ವಿವಿ ಮುಚ್ಚುವ  ಬದಲು ಅಗತ್ಯ ಸೌಲಭ್ಯ ಒದಗಿಸವೇಕು ಎಂದ ಅವರು ಈ ಬಾರಿಯ SSLC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಹಲಗೇರಿಯ ವಿದ್ಯಾರ್ಥಿನಿಗೆ 5 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಮಾಲಾ ಬಡಿಗೇರ ಘೋಷಿಸಿದರು.
--------------------
ದಿಕ್ಸೂಚಿ ಭಾಷಣ ಮಾಡಿದ ಶಾಸಕರು ರಾಘವೇಂದ್ರ ಹಿಟ್ನಾಳ ಮಾತನಾಡಿ ಕನ್ನಡ ಭಾಷೆ ಉಳಿದು ಬೆಳೆಯಲು ಕನ್ನಡ ಸಾಹಿತ್ಯ ಸಮ್ಮೇಳನ ಅವಶ್ಯ.‌ ಸಮ್ಮೇಳನಗಳಿಂದ ಸೌಹಾರ್ದ- ಸಂಸ್ಕೃತಿ ಬೆಳವಣಿಗೆ ಕಾರಣ ಆಗಲಿದೆ. ಕೊಪ್ಪಳ ಜಿಲ್ಲೆ ಸಾಹಿತ್ಯ ಸೇರಿದಂತೆ ವಿವಿಧ ರಂಗಕ್ಕೆ ಹಲವಾರು ಸಾಧಕರನ್ನು ನೀಡಿದೆ. ಕಸಾಪ ಮಾಜಿ ಜಿಲ್ಲಾಧ್ಯಕ್ಷರು ದಿ. ರಾಜಶೇಖರ ಅಂಗಡಿ ನೆನಪಿಗೆ ಹಲಗೇರಿಯಲ್ಲಿ ರಂಗಮಂದಿರ ನಿರ್ಮಾಣಕ್ಕೆ ಸಹಕಾರ ನೀಡುವೆ ಎಂದರು.
-------------------
ಪದ್ಮಶ್ರೀ ಭೀಮವ್ವ ಶಿಳ್ಳಿಕ್ಯಾತರ ಸಮ್ಮೇಳನ ಉದ್ಘಾಟಿಸಿದರು.
ವೇದಿಕೆಯಲ್ಲಿ ಸಿ.ವಿ.ಚಂದ್ರಶೇಖರ, ಡಾ. ಬಸವರಾಜ ಕ್ಯಾವಟರ್, ಮಂಜುಳಾ ಕರಡಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಹುಚ್ಚಮ್ಮ ಚೌದರಿ, ಶಂಭುಲಿಂಗನಗೌಡ ಹಲಗೇರಿ, ಮಂಜುನಾಥ ಮ್ಯಾಗಳಮನಿ,  ಎಸ್. ಬಾಲಚಂದ್ರನ್ ಹಲಗೇರಿ ಗ್ರಾ.ಪಂ‌. ಅಧ್ಯಕ್ಷರು ಯಲ್ಲಪ್ಪ ಓಜಿನಹಳ್ಳಿ, ಉಪಾಧ್ಯಕ್ಷರಾದ ವಿರುಪವ್ವ ಬೇಳೂರು ಇತರರು ಉಪಸ್ಥಿತರಿದ್ದರು.


ಸಂತೋಷ ದೇಶಪಾಂಡೆ ಸ್ವಾಗತಿಸಿದರು. ಪ್ರಾಸ್ತಾವಿಕ ರಾಮಚಂದ್ರಗೌಡ ಗೊಂಡಬಾಳ ಮಾತನಾಡಿದರು. ರಮೇಶ ತುಪ್ಪದ , ವೀರೇಶ ಕೊಪ್ಪಳ ನಿರೂಪಿಸಿದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 8 2025 9:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೆಚ್ಚು ಫಂಡ್ ತರುವ ಅನುಕೂಲ ಶತ್ರು ರಾಯರಡ್ಡಿ
Jul 8 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗಿನ ಹೆಲಿಕಾಪ್ಟರ್ ಗೆಳೆಯ ವಿರುದ್ದ ರಡ್ಡಿ ವಾಗ್ದಾಳಿ
Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ
Jul 4 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ
Jul 2 2025 9:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕರೆಂಟ್ ಕನೆಕ್ಷನ್ ಕಟ್ ಮಾಡಲು ಹೋದವರು ಕರೆಂಟ್ ಬಿಲ್ ಕಟ್ಟಿದರು
Jul 1 2025 8:01AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಮಗಾರಿ ಗುತ್ತಿಗೆ ಹಿಟ್ನಾಳ್ ಕುಟುಂಬದ ಕಪಿಮುಷ್ಠಿಯಲ್ಲಿ : ಸಿವಿಸಿ
Jun 26 2025 11:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ ಇಂಜಿನಿಯರಿಂಗ್ ಕಾಲೇಜ್ ಕಳಪೆ ಕಾಮಗಾರಿ
Jun 25 2025 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಅಭಿವೃದ್ದಿ ಏಕೆ ಮಾಯವಾಗಿದೆ ?
Jun 24 2025 4:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಮ್ಮ ಊರಿನ ಹತ್ರ ಸಕ್ಕರೆ ಫ್ಯಾಕ್ಟರಿ ಬೇಡ
Jun 24 2025 3:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ವಸತಿ ಇಲಾಖೆಯಲ್ಲಿ ಲಂಚ ಆರೋಪ : ತನಿಖೆ ನಡೆಯಲಿ





     
Copyright © 2021 Agni Divya News. All Rights Reserved.
Designed & Developed by We Make Digitize