Advt. 
 Views   334

ತೆರವು ನಿಲ್ಲಿಸಿ ಬದುಕು ಉಳಿಸಿ - ಬೀದಿ ಬದಿ ವ್ಯಾಪಾರಸ್ಥರ ಮನವಿ

Oct 28, 2025, 08:56 AM IST
ತೆರವು ನಿಲ್ಲಿಸಿ ಬದುಕು ಉಳಿಸಿ - ಬೀದಿ ಬದಿ ವ್ಯಾಪಾರಸ್ಥರ ಮನವಿ

ಕೊಪ್ಪಳ : ಹುಲಿಗಿ ಕ್ಷೇತ್ರದ ಬೀದಿ ಬದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಿ, ಆ ಪ್ರದೇಶ ಪಾರಂಪರಿಕ ಮಾರುಕಟ್ಟೆ ಎಂದು ಘೋಷಿಸಿ ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಬೀದಿ ಬದಿ ವ್ಯಾಪಾರಸ್ಥರ ಸಂಘದ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ಸಂಚಾಲಕ ಮಂಜುನಾಥ್ ಕೈದಾಳ್ ಅವರು, ಪ್ರಸಿದ್ಧ ಧಾರ್ಮಿಕ ಸ್ಥಳದಲ್ಲಿ ಹಲವಾರು ವರ್ಷಗಳಿಂದ ಬೀದಿ ಬದಿ ವ್ಯಾಪಾರ
ಮಾಡುತ್ತಿರುವ ಬಡವರು ಇತ್ತೀಚಿನ ತೆರವಿನಿಂದ ಸಂಕಷ್ಟದಲ್ಲಿದ್ದಾರೆ. ಅನೇಕರು ಮೈಕ್ರೋಫೈನಾನ್ಸ್ ಸಾಲದ ಕಂತುಗಳನ್ನು ಕಟ್ಟಲಾಗದೆ ಸಂಕಷ್ಟದಲ್ಲಿದ್ದಾರೆ. ಮಹಿಳೆಯರು, ಬಡ ಕುಟುಂಬಗಳು ಮತ್ತು ದಿನನಿತ್ಯದ ಆದಾಯದ ಮೇಲೆ ಬದುಕುತ್ತಿದ್ದ ವ್ಯಾಪಾರಸ್ಥರು ಈಗ ಆತಂಕದಲ್ಲಿದ್ದಾರೆ.

ಇತ್ತೀಚೆಗೆ ಶೀಗೆ ಹುಣ್ಣಿಮೆಯಂದು ಜನಸಂದಣಿ ತಡೆಯಲು ಏನೂ ಮುಂಜಾಗ್ರತೆ ಮಾಡದೆ ಜೆಸಿಬಿಯಿಂದ ವ್ಯಾಪಾರ ವಸ್ತು ಗುಡಿಸಲುಗಳನ್ನು ತೆರವುಗೊಳಿಸಿದ್ದಾರೆ.

ನವೆಂಬರ್ 5ರೊಳಗೆ ವ್ಯಾಪಾರಕ್ಕೆ ಅನುಮತಿ ನೀಡಬೇಕು ಇಲ್ಲವಾದರೆ ಮುಂದಿನ ಹಂತದ ತೀವ್ರ ಹೋರಾಟ ಮಾಡುವುದಾಗಿ ಹೇಳಿದರು.

ಸಂಘದ ಮುಖಂಡರು ಶರಣು ಗಡ್ಡಿ, ಕೌಶಲ್ಯ ದೊಡ್ಡಗೌಡರ್, ಕೃಷ್ಣಮೂರ್ತಿ (ರಾಜ್ಯ ಉಪಾಧ್ಯಕ್ಷರು), ಅನಿಲ್ (ಎಐಡಿವೈಓ ಮುಖಂಡರು) ಹಾಗೂ ಅಂಬರೀಶ್, ಶಿವಪುತ್ರಪ್ಪ, ಭಾಗ್ಯಮ್ಮ, ಯಮನೂರಪ್ಪ, ಹುಲಿಗೆಮ್ಮ, ರಾಘವೇಂದ್ರ, ನೇತ್ರಾವತಿ, ಪಾರ್ವತಿ ಮುಂತಾದ ವ್ಯಾಪಾರಸ್ಥ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
 



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Sep 7 2026 9:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕಿರಾಣಿ ಅಂಗಡಿಯಲ್ಲಿ ಕಳ್ಳತನ
Sep 6 2026 7:32PM | ಜಿಲ್ಲಾ ಸುದ್ದಿಗಳು | ಕೊಪ್ಪಳ ನೇತ್ರದಾನ ಮಹತ್ವ ಸಾರಿದ ಜಾಗೃತಿ ಜಾಥಾ
Sep 6 2026 7:04PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಗಲಿದ ರಂಗ ಜಂಗಮರಿಗೆ ನುಡಿ ನಮನ
Sep 6 2026 6:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ
Sep 5 2026 8:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ವಿವಿಧ ಇಲಾಖೆಗಳ ಭ್ರಷ್ಟಾಚಾರ ಬಗ್ಗೆ SIT ತನಿಖೆಯಾಗಲಿ : ಕೊಡ್ಲಿಪೇಟೆ
Sep 4 2026 3:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಿಲ್ಲಾಸ್ಪತ್ರೆ ಪಾರ್ಕಿಂಗ್‌ನಿಂದ ಬೈಕ್ ಕಳ್ಳತನ ಕೇಸ್ ನಿಂದ ಪತ್ತೆ
Sep 3 2026 7:51PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಬ್ಬಿಗೆ ₹5500 ಬೆಂಬಲ ಬೆಲೆ ನೀಡಿ : ರೈತರ ಆಗ್ರಹ
Sep 3 2026 6:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮೊದಲು ಕೆರೆ ಒತ್ತುವರಿ ತೆರವು : ಆಮೇಲೆ ಅಭಿವೃದ್ಧಿ
Sep 2 2026 7:23PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪಿಂಚಣಿ ಸ್ಥಗಿತ ಖಂಡಿಸಿ ಪ್ರತಿಭಟನೆ : ಅರ್ಹರಿಗೆ ಅನ್ಯಾಯ ಬೇಡ
Sep 2 2026 6:01PM | ಜಿಲ್ಲಾ ಸುದ್ದಿಗಳು | ಕೊಪ್ಪಳ KPSC ನೇಮಕಾತಿ ಹಗರಣ ಖಂಡಿಸಿ SFI ಪ್ರತಿಭಟನೆ




Copyright © 2026 Agni Divya. All Rights Reserved.
Designed & Developed by We Make Digitize