Advt. 
 Views   104

ಯುವಕ ಅರೆಸ್ಟ್ : ಐವರ ವಿರುದ್ದ ದೂರು

Nov 26, 2025, 06:42 AM IST
ಯುವಕ ಅರೆಸ್ಟ್ : ಐವರ ವಿರುದ್ದ ದೂರು

ಕೊಪ್ಪಳ : ಕುಕನೂರು ತಾಲೂಕಿನ ಹಾಸ್ಟೆಲ್ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮಗು ಹೆತ್ತ ಪ್ರಕರಣ ಸಂಬಂಧ ಪೋಕ್ಸೋ ಕೇಸ್ ದಾಖಲಾಗಿದ್ದು ಯುವಕನೊಬ್ಬನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಐವರ ವಿರುದ್ದ ದೂರು ದಾಖಲಾಗಿದೆ.

ಇಂದು ಬೆಳಗ್ಗೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಸ್ವಲ್ಪ ಹೊತ್ತಿಗೆ ಹಾಸ್ಟೆಲ್ ನಲ್ಲಿಯೆ 7 ತಿಂಗಳ ಮಗುವಿಗೆ ಜನ್ಮ ನೀಡಿದ್ದಾಳೆ.

ಈ ವಿಷಯದ ನಿರ್ಲಕ್ಷ್ಯ ಆಧಾರದಲ್ಲಿ ಹಾಸ್ಟೆಲ್ ವಾರ್ಡನ್, ಶಾಲಾ ಮುಖ್ಯೋಧ್ಯಾಯ, ಕ್ಲಾಸ್ ಗುರುಗಳು, ಹಾಗೂ ಇಬ್ಬರು ವೈದ್ಯರ ವಿರುದ್ದವೂ ದೂರು ದಾಖಲಾಗಿದೆ ಎಂದು ಮಕ್ಕಳ ರಕ್ಷಣಾ ಘಟಕದ ರಾಜ್ಯ ಸಮಿತಿ ಸದಸ್ಯರಾದ ರಾಮನಗೌಡ ಹೇಳಿದರು.

ಮಗು ಹೆತ್ತ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಹಾಗೂ ಮಗುವನ್ನು ಕೊಪ್ಪಳದ ಆಸ್ಪತ್ರೆಗೆ ದಾಖಲಿಸಿದ್ದು ಬೆಳಗ್ಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದ್ದರು.

ಸಂಜೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಆಸ್ಪತ್ರೆಗೆ ಭೇಟಿ ನೀಡಿದ್ದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಾಸ್ಟೆಲ್ ನಲ್ಲಿ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ವಿದ್ಯಾರ್ಥಿನಿ ಗೈರು ಆಗಿದ್ದಳು. ಘಟನೆಯಲ್ಲಿ RBS ಅಡಿ ಆರೋಗ್ಯ ತಪಾಸಣೆ ನಡೆಸುವ ಇಬ್ಬರು ವೈದ್ಯರು ಹಾಗೂ ವಾರ್ಡನ್, ಶಾಲೆಯ ಮುಖ್ಯೋಪಾಧ್ಯಾಯರು, ವರ್ಗ ಶಿಕ್ಷಕರ ನಿರ್ಲಕ್ಷ್ಯ ಕಂಡು ಬಂದಿದೆ ಅವರ ವಿರುದ್ದ ಕ್ರಮ ಜರುಗಿಸಲಾಗುತ್ತಿದೆ ಎಂದರು.

ಹಾಸ್ಟೆಲ್ ನಲ್ಲಿ ನಡೆದಿರುವ ಈ ಘಟನೆಯಿಂದ ಸಾರ್ವಜನಿಕ ವಲಯದಲ್ಲಿ ಆಘಾತ ವ್ಯಕ್ತವಾಗುತ್ತಿದೆ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Dec 11 2025 8:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಗರಸಭೆ ಚುನಾವಣೆಗೆ ಜೆಡಿಎಸ್ ತಯಾರಿ ?
Dec 10 2025 7:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಂತರ್ಜಾತಿ ವಿವಾಹ : ಎಸ್ಪಿ ಮೊರೆ ಹೋದ ಯುವಕ
Dec 9 2025 8:31PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಣಕ್ಕೆ ಬೇಡಿಕೆ : ದೂರು FIR
Dec 8 2025 7:12AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿ 10 : ಬೆಳಗಾವಿಯಲ್ಲಿ ಮೌನ ಪ್ರತಿಭಟನೆ
Dec 8 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರುದ್ದ ಧರಣಿಗೆ 39 ದಿನ : ಭಾದಿತ ಗ್ರಾಮದ ಮಹಿಳೆಯರು ಭಾಗಿ
Dec 8 2025 1:28AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಿವೆಡ್ಡಿಂಗ್ ಶೂಟ್ ನಂತರ ಅಪಘಾತದಲ್ಲಿ ಜೋಡಿ ಸಾವು
Dec 7 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸದನದಲ್ಲಿ ಮಾತನಾಡಿ ಇಲ್ಲ ರಾಜೀನಾಮೆ ನೀಡಿ
Dec 6 2025 6:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬೆಳೆದದ್ದು ಕಾರ್ಖಾನೆಗಳಿಂದ ಅಲ್ಲ : ಶ್ರೀನಿವಾಸ ಗುಪ್ತಾ
Dec 6 2025 5:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು ಸಾಗಾಟದವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ
Dec 5 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಅಶೋಕ ಸರ್ಕಲ್ : ಹಣ ದುರುಪಯೋಗ ತನಿಖೆ ?




Copyright © 2025 Agni Divya. All Rights Reserved.
Designed & Developed by We Make Digitize