Advt. 
 Views   84

ಕೊಪ್ಪಳ : ಹೆಚ್ಚುವರಿ ಬಸ್ ಸೌಕರ್ಯಕ್ಕೆ ಜೆಡಿಎಸ್ ಮನವಿ

Jan 14, 2026, 06:37 AM IST
ಕೊಪ್ಪಳ : ಹೆಚ್ಚುವರಿ ಬಸ್ ಸೌಕರ್ಯಕ್ಕೆ ಜೆಡಿಎಸ್ ಮನವಿ

ಕೊಪ್ಪಳ: ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಕಂಡು ಬಂದಿರುವ ಭಾರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಭಕ್ತಾದಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಬೇಕೆಂದು ಜೆಡಿಎಸ್ ಪಕ್ಷದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

ಮುಂದಿನ ದಿನಗಳಲ್ಲಿ ಸಂಕ್ರಾಂತಿ ಹಬ್ಬ ಮತ್ತು ಅಮಾವಾಸ್ಯೆ ಇರುವುದರಿಂದ ಲಕ್ಷಾಂತರ ಭಕ್ತರು ಶ್ರೀ ಗವಿಮಠ, ಹುಲಿಗೆಮ್ಮ ದೇವಸ್ಥಾನ ಮತ್ತು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಪ್ರಸ್ತುತ ಅಗತ್ಯ ಸಾರಿಗೆ ವ್ಯವಸ್ಥೆ ಕೊರತೆಯಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ.

ಮಹಿಳೆಯರ, ಮಕ್ಕಳ ಮತ್ತು ಹಿರಿಯ ನಾಗರಿಕರ ಬವಣೆ ಹೇಳತೀರದಾಗಿದೆ. ಆದ್ದರಿಂದ ನಗರಕ್ಕೆ ವಿವಿಧ ಭಾಗಗಳಿಂದ ಹೆಚ್ಚುವರಿ ಬಸ್ ಸೌಲಭ್ಯ ಹಾಗೂ ನಗರ ಮತ್ತು ಹೊರವಲಯಗಳಲ್ಲಿ ಹೆಚ್ಚುವರಿ ನಗರ ಸಾರಿಗೆ ವ್ಯವಸ್ಥೆ, ಸೂಕ್ತ ಸ್ಥಳಗಳಲ್ಲಿ ಬಸ್ ತಂಗುದಾಣ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ಈ ಕ್ರಮಗಳು ಹಬ್ಬಗಳು ಮತ್ತು ವಿಶೇಷ ಸಂದರ್ಭದಲ್ಲಿ ಜಾರಿಯಲ್ಲಿ ಇರುವಂತೆ ನೋಡಿಕೊಳ್ಳಬೇಕೆಂದು ವಿನಂತಿಸಿದ್ದಾರೆ.

ಪಕ್ಷದ ನಗರ ಘಟಕ ಅಧ್ಯಕ್ಷ ಸೋಮನಗೌಡ ಹೊಗರನಾಳ, ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ ಸೊರಟೂರ, ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ರಮೇಶ ಡಂಬ್ರಳ್ಳಿ, ಕೋಶಾಧ್ಯಕ್ಷ ಮೌನೇಶ್ ಕಿನ್ನಾಳ್, ನಗರ ಘಟಕ ಉಪಾಧ್ಯಕ್ಷ ಗಂಗಾಧರ ವಸ್ತ್ರದ್, ಮಹಿಳಾ ನಗರ ಘಟಕದ ಅಧ್ಯಕ್ಷೆ ನಿರ್ಮಲಾ ಮೇದಾರ, ಉಪಾಧ್ಯಕ್ಷೆ ರತ್ನಮ್ಮ ಹಿರೇಮಠ, ಮುಖಂಡರಾದ ಸಿದ್ದೇಶ ಇಂಗಳದಾಳ, ಬಸವರಾಜ ಎಸ್, ಪ್ರದೀಪ ಧರ್ಮಯಾತ, ಶರಣಮ್ಮ ಸoಗನಾಳ, ವೀಣಾ ಹುಲಗಪ್ಪ, ಭಾಗ್ಯ ಐವಳ್ಳಿ, ಯವರಾಜ ಬೋಚನಹಳ್ಳಿ ಇತರರು ಉಪಸ್ಥಿತರಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Feb 15 2026 6:15AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಫೆ. 24 ಕೊಪ್ಪಳ ಬಂದ್ ಹೋರಾಟ : ಗವಿಶ್ರಿಯವರ ಭೇಟಿಯಾದ ನಿಯೋಗ
Feb 14 2026 5:49AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಗಮನ ಸೆಳೆದ ಮಾಸ್ತಿ ಶಾಲೆಯ ಸೈನ್ಸ್ ಫೆಸ್ಟ್
Feb 14 2026 4:47AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬಿಜೆಪಿ ಮಂಡಲಗಳಿಗೆ ಹೊಸ ಅಧ್ಯಕ್ಷರು
Feb 13 2026 6:39PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಫೆ 24 ಕೊಪ್ಪಳ ಭಾಗ್ಯನಗರ ಬಂದ್
Feb 12 2026 7:02AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ವಿವಾಹ ಪ್ರೋತ್ಸಾಹಧನ 7.77 ಕೋಟಿ ಬಾಕಿ
Feb 12 2026 4:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ದೇಶಾದ್ಯಂತ ಕಾರ್ಮಿಕರ ಮುಷ್ಕರ : ಕೊಪ್ಪಳದಲ್ಲೂ ಬೃಹತ್ ಪ್ರತಿಭಟನೆ
Feb 11 2026 6:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಶಾಸಕರು ರಾಘವೇಂದ್ರ ಹಿಟ್ನಾಳ ₹1 ಕೋಟಿ ಅನುದಾನ
Feb 9 2026 8:59PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಾಂಧಿ ಟೋಪಿ ದೇಶೀ ಊಟ ಸಂಸ್ಕೃತಿಯ ಘಮ
Feb 9 2026 8:47PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಾಂಧಿ ಟೋಪಿ ದೇಶೀ ಊಟ ಸಂಸ್ಕೃತಿಯ ಘಮ
Feb 7 2026 6:44AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಬಾಳೆ ತೋಟದಲ್ಲಿ ಬೆಂಕಿ




Copyright © 2026 Agni Divya. All Rights Reserved.
Designed & Developed by We Make Digitize