Advt. 
 Views   111

ಮಾರ್ಚ್ 1 ರಂದು ಮುಧೋಳದಲ್ಲಿ ಪ್ರಶಸ್ತಿ ಪ್ರದಾನ

Feb 26, 2026, 06:21 AM IST
ಮಾರ್ಚ್ 1 ರಂದು ಮುಧೋಳದಲ್ಲಿ ಪ್ರಶಸ್ತಿ ಪ್ರದಾನ

ಕೊಪ್ಪಳ : ಬಾಗಲಕೋಟೆ ಜಿಲ್ಲೆ ಮುಧೋಳದ ಖಾಡೆ ಸಾಹಿತ್ಯ ಪ್ರತಿಷ್ಠಾನ ವತಿಯಿಂದ ಸಾಹಿತಿ ದಿ. ಜಿ. ಬಿ. ಖಾಡೆ ಸ್ಮರಣಾರ್ಥ ನೀಡಲಾಗುವ ‘ಜಿಬಿ ಖಾಡೆ ಜಾನಪದ ಸಾಧಕ ಪ್ರಶಸ್ತಿ’  ಗೆ ಕೊಪ್ಪಳ ಜಿಲ್ಲೆಯ ಶಿಕ್ಷಕ, ಅಂತರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಅಕಾಡೆಮಿ ಸದಸ್ಯ ಡಾ. ಜೀವನಸಾಬ ವಾಲಿಕಾರ್ ಆಯ್ಕೆಯಾಗಿದ್ದಾರೆ.

ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದವರಾದ ಡಾ. ಜೀವನಸಾಬ ವಾಲಿಕಾರ್ ಸದ್ಯ ಕುಷ್ಟಗಿಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಜಾನಪದ ಗಾಯಕರಾಗಿ ಪ್ರಸಿದ್ಧರಾಗಿದ್ದು, ಯುವಜನರಲ್ಲಿ ಜನಪದ ಕಲೆ-ಸಾಹಿತ್ಯದ ಬಗ್ಗೆ ಅಭಿಮಾನ ಮೂಡಿಸುತ್ತಿದ್ದಾರೆ. ಓಮನ್‌ನ ಸಲಾಲ ಮತ್ತು ಮಸ್ಕತ್, ಖತಾರ್‌ನ ದೋಹಾ ಸೇರಿದಂತೆ ವಿದೇಶಗಳಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಜಾನಪದ ಜಾತ್ರೆಗಳಲ್ಲಿ ಭಾಗವಹಿಸಿ ಕನ್ನಡ ಜಾನಪದ ಪರಂಪರೆಯನ್ನು ಪಸರಿಸಿದ್ದಾರೆ.

‘ಜನಪದ ಸಾಹಿತ್ಯದಲ್ಲಿ ಹಾಸ್ಯದ ನೆಲೆಗಳು’ ವಿಷಯದಲ್ಲಿ ಹಂಪಿ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದಿರುವ ಅವರು, ಇತ್ತೀಚೆಗೆ ‘ಜಾನಪದ ಮತ್ತು ಸಮಷ್ಟಿ ಪ್ರಜ್ಞೆ’ ಕೃತಿ ರಚಿಸಿದ್ದಾರೆ. ಈ ಎಲ್ಲ ಸಾಧನೆಯ ಹಿನ್ನೆಲೆಯಲ್ಲಿ 2026ರ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ ಮಾರ್ಚ್ 1 ರಂದು ಮುಧೋಳದಲ್ಲಿ ಪ್ರಶಸ್ತಿ ಪ್ರದಾನ ಜರುಗಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಅಶೋಕ್ ಜಿ. ಖಾಡೆ ತಿಳಿಸಿದ್ದಾರೆ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Mar 5 2026 7:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬಲ್ದೋಟಾ ಗೇಟ್ ಬಂದ್ : ಹೋರಾಟಕ್ಕೆ ಮಣಿಯುತ್ತಾ ಸರಕಾರ ?
Mar 4 2026 11:36PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕಾರ್ಖಾನೆ ಧೂಳಿಗೆ ಬೇಸತ್ತು ದಯಾಮರಣ ಬೇಡಿಕೆ
Mar 4 2026 6:32AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೋಳಿ ನಂತರ ಕೆರೆಯಲ್ಲಿ ಸ್ನಾನಕ್ಕೆ ಹೋದ ಇಬ್ಬರು ನೀರುಪಾಲು
Mar 2 2026 7:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮುಸ್ಲಿಂರ 4% ಮೀಸಲಾತಿ : ಕಾಂಗ್ರೆಸ್ ವಿರುದ್ಧ ನಾಡಗೌಡ್ರು ವಾಗ್ದಾಳಿ
Mar 1 2026 8:52PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಕ್ರಮ ಗಣಿಗಾರಿಕೆ ಮೇಲೆ ಪೊಲೀಸ್ ದಾಳಿ
Mar 1 2026 5:30PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಬಣವೆಗಳಿಗೆ ಬೆಂಕಿ ಸಂಪೂರ್ಣ ಭಸ್ಮ
Mar 1 2026 5:22PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಯುದ್ದ ಸ್ಥಿತಿ : ದುಬೈನಲ್ಲಿ ಉಳಿದುಕೊಂಡಿರುವ ರಾಯರಡ್ಡಿ ಪುತ್ರಿ
Feb 28 2026 5:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ
Feb 28 2026 4:59AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಂಸದರಿಂದ ಅಕ್ಷೇಪಾರ್ಹ ಪದ ಬಳಕೆ ನೋವುಂಟು ಮಾಡಿದೆ
Feb 27 2026 7:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಿಂದಲೇ ಜೆಡಿಎಸ್ ಮೊದಲ ಗೆಲುವು : ಸಮೀಕ್ಷೆ




Copyright © 2026 Agni Divya. All Rights Reserved.
Designed & Developed by We Make Digitize