Advt. 
 Views   54

ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

Feb 28, 2026, 05:03 AM IST
ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ : ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಸರ್ಕಾರಿ ಶಾಲಾ ಶಿಕ್ಷಕನಿಗೆ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ ಅವರು ಜೀವಾವಧಿ ಶಿಕ್ಷೆ ಹಾಗೂ 6 ಲಕ್ಷ ರೂ. ದಂಡ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಮಹಮ್ಮದ್ ಅಜರುದ್ದೀನ್ ಎಂಬ ಶಿಕ್ಷಕನೇ ಶಿಕ್ಷೆಗೆ ಒಳಪಟ್ಟಿರುವುದು.

2022ರ ಜೂನ್ 30 ರಂದು ಕಾರಟಗಿಯ ಜೆಪಿ ನಗರದಲ್ಲಿ ತಾನಿದ್ದ ಬಾಡಿಗೆ ಮನೆಯಲ್ಲಿ ಈತನು ಮಹಿಳೆ ಮೇಲೆ ಅತ್ಯಾಚಾರ ಎಸೆಗಿದ್ದ.

ಧಾರವಾಡ ಮೂಲದ ಇತ ಸಿಂಧನೂರು ಹತ್ತಿರದ ಸಿಂಗಾಪುರ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿದ್ದು ಕಾರಟಗಿಯಲ್ಲಿ ವಾಸವಾಗಿದ್ದ.

2022 ಜುಲೈ 2 ರಂದು ಪ್ರಕರಣ ದಾಖಲಾಗಿತ್ತು. ನಿನ್ನೆ ಶುಕ್ರವಾರ ಮಧ್ಯಾಹ್ನ ನ್ಯಾಯಾಧೀಶರಾದ ಸದಾನಂದ ನಾಯ್ಕ ಅವರು ತೀರ್ಪನ್ನು ಓದಿ ಶಿಕ್ಷೆ ಪ್ರಕಟಿಸಿದ್ದಾರೆ.

ದಂಡದ ಹಣದಲ್ಲಿ ಐದೂವರೆ ಲಕ್ಷ ರೂಪಾಯಿ ಸಂತ್ರಸ್ತರಿಗೆ ಹಾಗೂ 50 ಸಾವಿರ ರಾಜ್ಯ ಸರ್ಕಾರಕ್ಕೆ ಪಾವತಿಸಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಕಳೆದ ವರ್ಷ ಸಾಣಾಪುರ ಹತ್ತಿರ ನಡೆದ ಇಸ್ರೇಲ್ ಮಹಿಳಾ ಪ್ರಜೆ ಸೇರಿ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಓರ್ವನ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಮೂವರು ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಿದ್ದ ನ್ಯಾಯಾಧೀಶರು ನಿನ್ನೆ ಅತ್ಯಾಚಾರ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದಾರೆ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Mar 5 2026 7:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬಲ್ದೋಟಾ ಗೇಟ್ ಬಂದ್ : ಹೋರಾಟಕ್ಕೆ ಮಣಿಯುತ್ತಾ ಸರಕಾರ ?
Mar 4 2026 11:36PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕಾರ್ಖಾನೆ ಧೂಳಿಗೆ ಬೇಸತ್ತು ದಯಾಮರಣ ಬೇಡಿಕೆ
Mar 4 2026 6:32AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೋಳಿ ನಂತರ ಕೆರೆಯಲ್ಲಿ ಸ್ನಾನಕ್ಕೆ ಹೋದ ಇಬ್ಬರು ನೀರುಪಾಲು
Mar 2 2026 7:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮುಸ್ಲಿಂರ 4% ಮೀಸಲಾತಿ : ಕಾಂಗ್ರೆಸ್ ವಿರುದ್ಧ ನಾಡಗೌಡ್ರು ವಾಗ್ದಾಳಿ
Mar 1 2026 8:52PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಕ್ರಮ ಗಣಿಗಾರಿಕೆ ಮೇಲೆ ಪೊಲೀಸ್ ದಾಳಿ
Mar 1 2026 5:30PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಬಣವೆಗಳಿಗೆ ಬೆಂಕಿ ಸಂಪೂರ್ಣ ಭಸ್ಮ
Mar 1 2026 5:22PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಯುದ್ದ ಸ್ಥಿತಿ : ದುಬೈನಲ್ಲಿ ಉಳಿದುಕೊಂಡಿರುವ ರಾಯರಡ್ಡಿ ಪುತ್ರಿ
Feb 28 2026 4:59AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಂಸದರಿಂದ ಅಕ್ಷೇಪಾರ್ಹ ಪದ ಬಳಕೆ ನೋವುಂಟು ಮಾಡಿದೆ
Feb 27 2026 7:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಿಂದಲೇ ಜೆಡಿಎಸ್ ಮೊದಲ ಗೆಲುವು : ಸಮೀಕ್ಷೆ
Feb 26 2026 6:21AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮಾರ್ಚ್ 1 ರಂದು ಮುಧೋಳದಲ್ಲಿ ಪ್ರಶಸ್ತಿ ಪ್ರದಾನ




Copyright © 2026 Agni Divya. All Rights Reserved.
Designed & Developed by We Make Digitize