Advt. 
 Views   89

ನೀಟ್ ರದ್ದು ಮಾಡಿ ರಾಜ್ಯಗಳಿಗೆ ಅಧಿಕಾರ ನೀಡಿ

May 14, 2026, 09:05 AM IST
ನೀಟ್ ರದ್ದು ಮಾಡಿ ರಾಜ್ಯಗಳಿಗೆ ಅಧಿಕಾರ ನೀಡಿ

ಕೊಪ್ಪಳ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಕಾಂಗ್ರೆಸ್ ಆಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಈ ಸಂದರ್ಭ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಜ್ಯೋತಿ ಗೊಂಡಬಾಳ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದಲ್ಲಿ ಕೆಲವರು ಅರೆಸ್ಟ್ ಆಗಿದ್ದಾರೆ ಎನ್.ಟಿ.ಎ. ಮೂಲಕ ನೀಟ್ ಮಾಡುವುದನ್ನು ರದ್ದುಗೊಳಿಸಿ, ಇದೇ ಸಾಲಿನಿಂದ ಆಯಾ ರಾಜ್ಯಗಳಿಗೆ ಅವಕಾಶ ಕೊಡಿ ಎಂದು ಆಗ್ರಹಿಸಿದರು.

ಬಿಜೆಪಿಗರ ಮಕ್ಕಳೂ ಸಹ ನೀಟ್ ಬರೆದಿದ್ದು ಅವರಲ್ಲೂ ಅನೇಕರಿಗೆ ಅನ್ಯಾಯ ಆಗುವದನ್ನು ಬಿಜೆಪಿ ಸಂಸದರು ಮುಖಂಡರು ಗಮನಿಸಿ ನಮ್ಮ ಹೋರಾಟಕ್ಕೆ ಕೈ ಜೋಡಿಸಿ ಮಬ್ಭಕ್ತರಲ್ಲ ಎಂದು ಸಾಬೀತು ಮಾಡಲಿ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಮಾತನಾಡಿ - ಎನ್.ಟಿ.ಎ. ಅಂದ್ರೆ ನೆವರ್ ಟ್ರಸ್ಟೆಡ್ ಎಜೆನ್ಸಿ (ಎಂದಿಗೂ ನಂಬಿಕೆಗೆ ಅರ್ಹವಲ್ಲದ ಎಜೆನ್ಸಿ) ಆಗಿದೆ.

ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ನೀಟ್ ರದ್ದು ಮಾಡಿ ಆಯಾ ರಾಜ್ಯಗಳೇ ಸೀಟು ಹಂಚಿಕೆ ಪ್ರಕ್ರಿಯೆ ಮಾಡಲು ಅವಕಾಶ ಕೊಡಬೇಕು. ಬಿಜೆಪಿಯ 10 ವರ್ಷ ಆಡಳಿತದಲ್ಲಿ ಎನ್.ಟಿ.ಎ. 70 ಸಲ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೇಪರ್ ಲೀಕ್ ಮಾಡಿ ಮಾರಾಟ ಮಾಡಿದ್ದು ನೋಡಿದರೆ ಇದೊಂದು ಕಾರ್ಪೊರೇಟ್ ಪರೀಕ್ಷಾ ವ್ಯವಹಾರ ಆಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮೂಲಕ ದೇಶದ 22.5 ಲಕ್ಷ ಮಕ್ಕಳ ಜೀವನದ ಜೊತೆಗೆ ಆಟ ಆಡಿದ್ದಾರೆ. ಇವರಿಗೆ ಕಠಿಣ ಶಿಕ್ಷೆ ಆಗಬೇಕು. ಭಾಷಣ ಶೂರ ಪ್ರಧಾನಮಂತ್ರಿ ಮತ್ತು ಶಿಕ್ಷಣ ಸಚಿವರುಗಳು, ಗೃಹ ಮಂತ್ರಿ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಅಕ್ಬರ್ ಪಾಶಾ ಪಲ್ಟನ್, ಸೋಮಶೇಖರ್ ಹಿಟ್ನಾಳ, ಮಲ್ಲಿಕಾರ್ಜುನ ಪೂಜಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಿಂಗರಾಜ್ ಕಲ್ಗುಡಿ, ಹನುಮೇಶ ಬೆಣ್ಣಿ, ಕುರುಗೋಡ ರವಿ ಯಾದವ ಅನೇಕರಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Jun 11 2026 12:51PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಮಹಿಳೆಯ ಸುಟ್ಟು ಕೊಂದ ಆರೋಪಿ ಅರೆಸ್ಟ್
Jun 9 2026 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ದಾಖಲೆಗಳೊಂದಿಗೆ ಜಿಲ್ಲಾಡಳಿತಕ್ಕೆ ದೂರು
Jun 9 2026 6:56PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ : ಗಾಣಿಗ ಸಂಘ ಒತ್ತಾಯ
Jun 7 2026 6:40PM | ಜಿಲ್ಲಾ ಸುದ್ದಿಗಳು | ಕೊಪ್ಪಳ ನಮ್ಮ ಪಕ್ಷಕ್ಕೆ ಬನ್ನಿ : ಬಿಜೆಪಿ-ಜೆಡಿಎಸ್ ನಾಯಕರ ಆಹ್ವಾನ
Jun 7 2026 11:57AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ : ನಿಗೂಢ ಚಾಕು ದಾಳಿ: ತಂದೆ ಮಗಳು ಸಾವು
Jun 6 2026 7:46PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಸಚಿವ ಸ್ಥಾನಕ್ಕೆ ಹೋರಾಟ ಸಭೆಯಲ್ಲಿ ಭಿನ್ನಮತ
Jun 6 2026 8:08AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ಷರಾಭ್ಯಾಸ ಮಕ್ಕಳ ಉಜ್ವಲ ಭವಿಷ್ಯದ ಮೊದಲ ಹೆಜ್ಜೆ
Jun 5 2026 8:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಮೀರ್ ಪರ ಡಿಸಿಎಂ ಸ್ಥಾನಕ್ಕಾಗಿ ಆಗ್ರಹ
Jun 4 2026 8:13PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪೊಲೀಸ್ ಠಾಣೆ, ಪುರಸಭೆಗೆ ಕೆಆರ್‌ಎಸ್ ಪಕ್ಷ ಮನವಿ
Jun 4 2026 5:36PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿಕೆಶಿ ನೂತನ ಸಿಎಂ : ಕೊಪ್ಪಳದಲ್ಲಿ ಸಂಭ್ರಮದ ಕೊರತೆ !




Copyright © 2026 Agni Divya. All Rights Reserved.
Designed & Developed by We Make Digitize