Advt. 
 Views   384

ಸಾಲ : ಒಂದೆ ಕುಟುಂಬದ ಮೂವರು ನೇಣಿಗೆ ಶರಣು

Jul 04, 2026, 03:48 PM IST
ಸಾಲ : ಒಂದೆ ಕುಟುಂಬದ ಮೂವರು ನೇಣಿಗೆ ಶರಣು

ಕೊಪ್ಪಳ : ಗಂಗಾವತಿಯ ಪ್ರಶಾಂತ ನಗರದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕಾಸ್ಪದ ಘಟನೆ ಇಂದು ಬೆಳಕಿಗೆ ಬಂದಿದ್ದು, ಸಾಲದ ಬಾಧೆಯೇ ಈ ದುರಂತಕ್ಕೆ ಕಾರಣ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮೃತರನ್ನು ಗಂಗಾವತಿಯ ನ್ಯೂ ಕಾಮಾಕ್ಷಿ ಜುವೆಲರ್ಸ್ ಮಾಲೀಕರಾದ ಪ್ರಕಾಶ್ ರಾಯ್ಕರ್, ಅವರ ಪತ್ನಿ ಪ್ರಭಾ ರಾಯ್ಕರ್ ಹಾಗೂ ಪುತ್ರ ಶಶಾಂಕ್ ರಾಯ್ಕರ್ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಎಲ್. ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆ ಪ್ರಕಾರ ಸಾಲದ ಬಾಧೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೃತ ಕುಟುಂಬಕ್ಕೆ ಸುಮಾರು ₹3 ರಿಂದ ₹4 ಕೋಟಿ ಸಾಲವಿತ್ತು ಎನ್ನಲಾಗಿದ್ದು, ಮಾನ್ವಿ ಪಟ್ಟಣದ ಬ್ಯಾಂಕ್‌ನಲ್ಲಿ ಜೆ. ನಾಗರಾಜ್ ಅವರ ಸಾಲಕ್ಕೆ ಪ್ರಕಾಶ್ ರಾಯ್ಕರ್ ಶ್ಯೂರಿಟಿ (ಗ್ಯಾರಂಟಿ) ಹಾಕಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಇದಲ್ಲದೆ ವೈಯಕ್ತಿಕ ಸಾಲದ ಹೊರೆ ಹಾಗೂ ಸಾಲಗಾರರ ಕಿರುಕುಳದಿಂದ ಕುಟುಂಬ ತೀವ್ರ ಮಾನಸಿಕ ಒತ್ತಡದಲ್ಲಿತ್ತು ಎಂದು ತಿಳಿದುಬಂದಿದೆ.

ಪ್ರಕಾಶ್ ರಾಯ್ಕರ್ ಅವರ ಮನೆಯನ್ನು ಮಾನ್ವಿ ಬ್ಯಾಂಕ್ ಅಧಿಕಾರಿಗಳು ಈಗಾಗಲೇ ಸೀಜ್ ಮಾಡಿದ್ದರು. ಫೆಬ್ರುವರಿ ತಿಂಗಳವರೆಗೆ ಇದೇ ಮನೆಯಲ್ಲಿ ಬಾಡಿಗೆದಾರರಾಗಿ ವಾಸವಿದ್ದ ಕುಟುಂಬ, ನಂತರ ಬೇರೆ ಬಾಡಿಗೆ ಮನೆಗೆ ಸ್ಥಳಾಂತರಗೊಂಡಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಪುತ್ರ ಶಶಾಂಕ್ ಎರಡು ದಿನಗಳ ಹಿಂದೆ ಗಂಗಾವತಿಗೆ ಬಂದಿದ್ದ ಎನ್ನಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಸೀಜ್ ಮಾಡಲಾಗಿದ್ದ ಮನೆಯ ಹಿಂಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ ಮೂವರೂ ಅಲ್ಲಿಯೇ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಗಂಗಾವತಿ ನಗರ ಠಾಣೆ ಪೊಲೀಸರು ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವೈದ್ಯಕೀಯ ವರದಿ ಹಾಗೂ ತನಿಖೆ ಪೂರ್ಣಗೊಂಡ ಬಳಿಕವೇ ಸಾವಿಗೆ ನಿಖರ ಕಾರಣ ಅಧಿಕೃತವಾಗಿ ತಿಳಿಯಲಿದೆ.

ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Aug 16 2026 7:55AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಾಳಾದ ರಸ್ತೆ : ಸಚಿವರು ಶಾಸಕ ಸಂಸದರಿಗೆ ಪ್ರತಿಭಟನೆಯ ಬಿಸಿ
Aug 13 2026 7:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ 350 ಅಡಿ ತ್ರಿವರ್ಣ ಧ್ವಜದ ಮೆರವಣಿಗೆ
Aug 12 2026 7:49PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೊರ ರಾಜ್ಯಗಳಿಗೆ ನಿಗದಿ ಮಾಡಿದ ನಂತರ ನಮ್ಮ ರೈತರ ನೆನಪಾಯಿತೇ...?
Aug 11 2026 7:40PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಶಾಸಕರೆ ಸದನದಲ್ಲಿ ಸಮಸ್ಯೆ ಬಗ್ಗೆ ಚರ್ಚಿಸಿ : ಸಿವಿಸಿ
Aug 11 2026 6:22PM | ಜಿಲ್ಲಾ ಸುದ್ದಿಗಳು | ಕೊಪ್ಪಳ ತುಂಗಭದ್ರಾ ಡ್ಯಾಂನಿಂದ ವಿವಿಧ ಕಾಲುವೆಗಳಿಗೆ ನೀರು
Aug 11 2026 5:32PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಚುನಾವಣಾ ತಯಾರಿ ಬಗ್ಗೆ SDPI ಸಂಘಟನಾ ಸಭೆ
Aug 10 2026 8:42PM | ಜಿಲ್ಲಾ ಸುದ್ದಿಗಳು | ಕೊಪ್ಪಳ 7083 ಮೃತರ ಖಾತೆಗೆ ಹಣ
Aug 10 2026 5:27PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಜೈಲ್ ಭರೋ ಚಳುವಳಿ
Aug 8 2026 5:48PM | ವೈವಿಧ್ಯ | ವಿಷ್ಮಯ ಕವನ : ಪ್ರೀತಿ ಕೊಂದವಳು !
Aug 8 2026 8:25AM | ಜಿಲ್ಲಾ ಸುದ್ದಿಗಳು | ಕೊಪ್ಪಳ 26 ಹುದ್ದೆಗಳಿಗೆ 3 ಸಾವಿರಕ್ಕೂ ಹೆಚ್ಚು ಅರ್ಜಿ




Copyright © 2026 Agni Divya. All Rights Reserved.
Designed & Developed by We Make Digitize