Advt. 
 Views   176

ಜೆಡಿಎಸ್ ಬರ ಅಧ್ಯಯನ ತಂಡಕ್ಕೆ CVC

Jul 10, 2026, 03:56 PM IST
ಜೆಡಿಎಸ್ ಬರ ಅಧ್ಯಯನ ತಂಡಕ್ಕೆ CVC

ಕೊಪ್ಪಳ : ರಾಜ್ಯದಲ್ಲಿ ಸಂಭವನೀಯ ಬರ ಹಾಗೂ ನೆರೆ ಹಾನಿ ಅಧ್ಯಯನಕ್ಕೆ ಜೆಡಿಎಸ್ ತಂಡ ರಚನೆಯಾಗಿದ್ದು ತಂಡದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಸದಸ್ಯರಾಗಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಸಿವಿಸಿ ನೇಮಕ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕಕ್ಕೆ ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಅಧ್ಯಯನ ತಂಡದ ಅಧ್ಯಕ್ಷರಾಗಿದ್ದು ಈ ಭಾಗಗಳ ಅಧ್ಯಯನ ತಂಡದ ಸದಸ್ಯರಾಗಿ ಸಿ ವಿ ಚಂದ್ರಶೇಖರ್ ಕಾರ್ಯ ನಿರ್ವಹಿಸಲಿದ್ದಾರೆ. ತಂಡದಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಇದ್ದಾರೆ.

ಕೊಪ್ಪಳವು ಸೇರಿದಂತೆ ಕಲ್ಯಾಣ ಕರ್ನಾಟಕದ ಭಾಗದ ಬಹುತೇಕ ಜಿಲ್ಲೆಗಳು ತೀವ್ರ ಬರಗಾಲ ಪರಿಸ್ಥಿತಿಯತ್ತ ಹೆಜ್ಜೆ ಇಡುತ್ತಿವೆ.

ಈ ವರ್ಷ ವಾಡಿಕೆಗಿಂತ 40% ಕ್ಕಿಂತ ಕಡಿಮೆ ಮಳೆಯಾಗಿದೆ. ಇದರಿಂದ ಏಕದಳ, ದ್ವಿದಳ ಹಾಗೂ ಇತರೆ ಬೆಳೆಗಳಿಗೆ ತೀವ್ರ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ.

ಈ ಭಾಗಗಳ ಜೆಡಿಎಸ್ ತಂಡದ ಸದಸ್ಯರು ಶೀಘ್ರದಲ್ಲಿಯೇ ಸಭೆ ಸೇರಿ ಪ್ರವಾಸ ಭೇಟಿಯ ವೇಳಾಪಟ್ಟಿ ಅಂತಿಮಗೊಳಿಸಲಿದ್ದಾರೆ ಎಂದು ಜೆಡಿಎಸ್ ಪ್ರಕಟಣೆ ತಿಳಿಸಿದೆ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Aug 16 2026 7:55AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಾಳಾದ ರಸ್ತೆ : ಸಚಿವರು ಶಾಸಕ ಸಂಸದರಿಗೆ ಪ್ರತಿಭಟನೆಯ ಬಿಸಿ
Aug 13 2026 7:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ 350 ಅಡಿ ತ್ರಿವರ್ಣ ಧ್ವಜದ ಮೆರವಣಿಗೆ
Aug 12 2026 7:49PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೊರ ರಾಜ್ಯಗಳಿಗೆ ನಿಗದಿ ಮಾಡಿದ ನಂತರ ನಮ್ಮ ರೈತರ ನೆನಪಾಯಿತೇ...?
Aug 11 2026 7:40PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಶಾಸಕರೆ ಸದನದಲ್ಲಿ ಸಮಸ್ಯೆ ಬಗ್ಗೆ ಚರ್ಚಿಸಿ : ಸಿವಿಸಿ
Aug 11 2026 6:22PM | ಜಿಲ್ಲಾ ಸುದ್ದಿಗಳು | ಕೊಪ್ಪಳ ತುಂಗಭದ್ರಾ ಡ್ಯಾಂನಿಂದ ವಿವಿಧ ಕಾಲುವೆಗಳಿಗೆ ನೀರು
Aug 11 2026 5:32PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಚುನಾವಣಾ ತಯಾರಿ ಬಗ್ಗೆ SDPI ಸಂಘಟನಾ ಸಭೆ
Aug 10 2026 8:42PM | ಜಿಲ್ಲಾ ಸುದ್ದಿಗಳು | ಕೊಪ್ಪಳ 7083 ಮೃತರ ಖಾತೆಗೆ ಹಣ
Aug 10 2026 5:27PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಜೈಲ್ ಭರೋ ಚಳುವಳಿ
Aug 8 2026 5:48PM | ವೈವಿಧ್ಯ | ವಿಷ್ಮಯ ಕವನ : ಪ್ರೀತಿ ಕೊಂದವಳು !
Aug 8 2026 8:25AM | ಜಿಲ್ಲಾ ಸುದ್ದಿಗಳು | ಕೊಪ್ಪಳ 26 ಹುದ್ದೆಗಳಿಗೆ 3 ಸಾವಿರಕ್ಕೂ ಹೆಚ್ಚು ಅರ್ಜಿ




Copyright © 2026 Agni Divya. All Rights Reserved.
Designed & Developed by We Make Digitize