Advt. 
 Views   4213

ದಾಂಪತ್ಯದಲ್ಲಿ ಪರಸ್ಪರ ಅರ್ಥಮಾಡಿಕೊಂಡವರ ಬದುಕು ಸ್ವರ್ಗ ಸುಖ

Jul 21, 2022, 07:16 PM IST
ದಾಂಪತ್ಯದಲ್ಲಿ ಪರಸ್ಪರ ಅರ್ಥಮಾಡಿಕೊಂಡವರ ಬದುಕು ಸ್ವರ್ಗ ಸುಖ

ಅತ್ತ ವಿವಾಹ ಸಂಭ್ರಮ. ಮತ್ತೊಂದೆಡೆ ರುಚಿ ರುಚಿ ಭಕ್ಷ್ಯ ಭೋಜನ, ಇನ್ನೊಂದೆಡೆ ಸಾಹಿತ್ಯದ ಸವಿರುಚಿಯ ಸೊಗಸು. ಇದು ಗುರುವಾರ ಕಂಡು ಬಂದದ್ದು ಕೊಪ್ಪಳದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ.

ಗುರುವಾರ ಶಕ್ತಿಶಾರದೆಯ ಮೇಳ, ಬೆರಗು ಪ್ರಕಾಶನದ ರೂವಾರಿ ಡಿ.ಎಂ.ಬಡಿಗೇರ ಅವರ ಪುತ್ರ ಗೌತಮ ಹಾಗೂ ಸುಪ್ರಿಯಾ ವಿವಾಹ ಸಂದರ್ಭದಲ್ಲಿ.

 ದಾಂಪತ್ಯದಲ್ಲಿ ಪರಸ್ಪರ ಅರ್ಥಮಾಡಿಕೊಂಡವರ ಬದುಕು ಸ್ವರ್ಗ ಸುಖ. ಸಂಸಾರದಲ್ಲಿ ಏರಿಳಿತ ಸಾಮಾನ್ಯ. ಸಂಸಾರದಲ್ಲಿ ಬಾಗಿದವರು ಸುಖವಾಗಿ ಬಾಳುತ್ತಾರೆ. ಇದು ಸುಖ ಸಂಸಾರದ ಗುಟ್ಟು ಎಂದು ಖ್ಯಾತ ವಾಗ್ಮಿ ಡಾ. ಶಂಭು ಬಳಿಗಾರ ಅವರು ಸುಖಿ ದಾಂಪತ್ಯದ ಬಗ್ಗೆ  ಹೇಳಿದರು.

ಸಂಸಾರ ಅಂಂದ್ರೆ ಮೂರು ಥರ. ಹಾಲು-ಜೇನು- ಹೊಂದಾಣಿಕೆ ಮತ್ತು ಸುಖ. ಹಾಲು-ನೀರು- ಹೊಂದಾಣಿಕೆ ಮತ್ತು ತುಸು ನೆಮ್ಮದಿ.  ಹುಳಿ ಮಜ್ಜಿಗೆ ಹೇಳೋದೆ ಬೇಡ. ಸಂಸಾರದಲ್ಲಿ ಸುಖವಾಗಿ ಬಾಳಲು ಶ್ರೀಮಂತಿಕೆ- ಬಡತನ ಕಾರಣ ಅಲ್ಲ. ಸಮರಸವೇ ದಾಂಪತ್ಯದ ನಿಜವಾದ ಗುಟ್ಟು ಎಂದು ಅವರು ಹೇಳಿದರು. 

ವಿವಾಹಿತ ಮತ್ತು ಅವಿವಾಹಿತರ ಮಸ್ಥಿತಿ ಇಲಿ ಮತ್ತು ಬೋನಿಗೆ ಹೋಲಿಸಿ ಹೇಳಿದ ರೂಪಕ ಸಾಹಿತ್ಯಾಸಕ್ತರನ್ನು ನಗೆಗಡಲಲ್ಲಿ ತೇಲಿಸಿತು.

ಮದುವೆ ಮತ್ತು ದಾಂಪತ್ಯ ಕುರಿತ ಅನೇಕ ಪ್ರಸಂಗಗಳ ಬಗ್ಗೆ ಉಪಮೇಯಗಳೊಂದಿಗೆ ರಸವತ್ತಾಗಿ ವಿವರಿಸುತ್ತ ನೆರೆದ ಸಾಹಿತ್ಯಾಸಕ್ತರ ಮನಗೆದ್ದರು.

'ಬಡವನಾದರೇನು ಪ್ರಿಯೆ ಕೈ ತುತ್ತು ಉಣಿಸುವೆ' ಹಾಡಿನ ಖ್ಯಾತಿಯ ಜಾಜಿ ಮಲ್ಲಿಗೆ ಕವಿ ಸತ್ಯಾನಂದ ಪಾತ್ರೋಟ ಕೊಪ್ಪಳದ ಸಾಹಿತ್ಯ ವಲಯದ ಒಡನಾಟ ನೆನೆದರು. ತಮಗೆ ಬಂದಿರುವ 'ಜಾಜಿ ಮಲ್ಲಿಗೆ ಕವಿ' ಬಿರುದು  ಕೊಪ್ಪಳದಲ್ಲಿ ಜರುಗಿದ 62 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿ ನಿರೂಪಿಸುತ್ತಿದ್ದ ಸಾಹಿತಿ ವಿಜಯಶ್ರೀ ಸಬರದರವರು ಕೊಟ್ಟ ಬಿರುದು ಶಾಶ್ವತವಾಗಿ ತಮ್ಮೊಂದಿಗೆ ಇರುವ ನೆನಪುಗಳನ್ನು ಮೆಲುಕು ಹಾಕಿದರು.

ಡಾ.ಸಿದ್ದಲಿಂಗ ಪಟ್ಟಣಶೆಟ್ಟಿಯವರ ಮೊದಲ ಕವನ ಸಂಕಲನ 'ನೀನಾ' ಮರುಮುದ್ರಣದ ಲೋಕಾರ್ಪಣೆ ಮಾಡಿದ ಬಳ್ಳಾರಿಯ ಲೋಹಿಯಾ ಪ್ರಕಾಶನದ ಸಿ.ಚೆನ್ನಬಸವಣ್ಣ  ಮಾತನಾಡಿದರು.

ಹೇಮಾ ಪಟ್ಟಣಶೆಟ್ಟಿಯವರು ದಾಂಪತ್ಯದ ಕಾವ್ಯ ವಾಚನ ಮಾಡಿದರು. ಖ್ಯಾತ ಪ್ರಬಂಧಕಾರ ಈರಪ್ಪ ಕಂಬಳಿ ಮಾತನಾಡಿದರು. ಸಾಹಿತಿ ಹೆಚ್.ಎಸ್.ಪಾಟೀಲರು ಅಧ್ಯಕ್ಷತೆ ವಹಿಸಿದ್ದರು. ಬೆರಗು ಪ್ರಕಾಶನದ ಡಿ.ಎಂ.ಬಡಿಗೇರ ಉಪಸ್ಥಿತರಿದ್ದರು.

ಸಾಹಿತಿ ಮಹೇಶ ಬಳ್ಳಾರಿ ನಿರೂಪಿಸಿದರು. ಗವಿಸಿದ್ದಪ್ಪ ಕೊಪ್ಪಳ ವಂದಿಸಿದರು.

ಕಾರ್ಯಕ್ರಮದಲ್ಲಿ ಕಸಾಪ ಮಾಜಿ ಜಿಲ್ಲಾಧ್ಯಕ್ಷ ವೀರಣ್ಣ ನಿಂಗೋಜಿ, ಆರ್.ಎಸ್. ಸರಗಣಾಚಾರ, ಅಂದಪ್ಪ ಬೆಣಕಲ್, ಡಾ.ಮಹಾಂತೇಶ ಮಲ್ಲನಗೌಡರ, ರಮೇಶ ಬನ್ನಿಕೊಪ್ಪ , ಹಿರಿಯ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಸಾವಿತ್ರಿ ಮುಜುಮದಾರ, ಮಲ್ಲಿಕಾರ್ಜುನ ಹ್ಯಾಟಿ, ಶರಣಬಸಪ್ಪ ದಾನಕೈ , ರಾಜೇಶ ಯಾವಗಲ್, ಎಸ್.ಟಿ.ಹಂಚಿನಾಳ, ಸುಮಂಗಲಾ ಹಂಚಿನಾಳ,  ಕಳಕೇಶ ಬಳಿಗಾರ ಸೇರಿದಂತೆ ಜಿಲ್ಲೆಯ ಸಾಹಿತ್ಯ ವಲಯದ ಅನೇಕ ಮಹನೀಯರು ಉಪಸ್ಥಿತರಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Jan 17 2026 4:34AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಾಮಾಜಿಕ ಕಳಕಳಿಯ ಮಿಠಾಯಿ ಅಂಗಡಿಯವರಿಗೆ ಕರವೇ ಸನ್ಮಾನ
Jan 16 2026 7:05PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮುಂಬೈನಲ್ಲಿ ಗೆಲುವು : ವೋಟ್ ಚೋರಿ ಅಲ್ಲ ದಿಲ್ ಚೋರಿ
Jan 14 2026 6:42AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಬೃಹತ್ ಗಾತ್ರದ ಹೆಬ್ಬಾವು ರಕ್ಷಣೆ
Jan 14 2026 6:37AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಹೆಚ್ಚುವರಿ ಬಸ್ ಸೌಕರ್ಯಕ್ಕೆ ಜೆಡಿಎಸ್ ಮನವಿ
Jan 14 2026 6:29AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಊಟದ ತಟ್ಟೆ–ನೀರಿನ ಗ್ಲಾಸ್ ದೇಣಿಗೆ
Jan 14 2026 6:18AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮನರೆಗಾ ಹೆಸರು ಬದಲಾವಣೆ : ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ - ತೆಂಗಿನಕಾಯಿ
Jan 14 2026 5:58AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಬಹುಮತ ಇದ್ದರೂ ಕಾಂಗ್ರೆಸ್ ಸೋಲು: ನಾಲತ್ವಾಡ
Jan 13 2026 8:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಚುನಾವಣೆ : ಬಿಜೆಪಿ ಜಯಭೇರಿ
Jan 13 2026 8:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಚುನಾವಣೆ : ಬಿಜೆಪಿ ಜಯಭೇರಿ
Jan 12 2026 4:16AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಸನ್ನ ಗಡಾದ




Copyright © 2026 Agni Divya. All Rights Reserved.
Designed & Developed by We Make Digitize