Advt. 
 Views   4147

ಮಕ್ಕಳಿಗೆ ಶಿಕ್ಷಣ ನೀಡುವುದೇ ದೊಡ್ಡ ಧರ್ಮ- ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು

Oct 08, 2022, 07:55 PM IST
ಮಕ್ಕಳಿಗೆ ಶಿಕ್ಷಣ ನೀಡುವುದೇ ದೊಡ್ಡ ಧರ್ಮ- ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು

ಕೊಪ್ಪಳ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಪುರಸ್ಕಾರ ಮಾಡೋದು ಅತ್ಯುತ್ತಮ ಕಾರ್ಯ.

ಪ್ರತಿಭೆ ಯಾರ ಸೊತ್ತಲ್ಲ. ಅದು ಬಜಾರದಲ್ಲಿ ಸಿಗುವುದಿಲ್ಲ. ಪ್ರತಿಭೆ ಶ್ರೀಮಂತರ ಸೊತ್ತಲ್ಲ. ಅದು ಸಾಧಕರ ಸೊತ್ತು ಅನ್ನೋದಕ್ಕೆ ಸಾಕ್ಷಿ ಕಲಾಂ ಅವರು. ಅವರು ಹಡಗು ಕಟ್ಟುವವರ ಮಗ. ದೇಶ ಅಷ್ಟೇ ಅಲ್ಲ ವಿಶ್ವವೇ ಮೆಚ್ಚುವಂಥವರು ಆಗಿದ್ರು.

ದುಡ್ಡು ಇದ್ರೆ ಜಗತ್ತು ಆಳಬಹುದು ಅಲ್ಲ. ಜ್ಞಾನ ಇದ್ರೆ ಜಗತ್ತು ಆಳಬಹುದು. ಮೆದುಳಿನಲ್ಲಿ ಜ್ಞಾನ, ಹೃದಯದಲ್ಲಿ ಎಲ್ಲರ ಬಗ್ಗೆ ಪ್ರೇಮ ಇದ್ದರೆ ಜಗತ್ತು ಆಳಬಹುದು.

ಗಾಂಧಿಜಿಯವರನ್ನು ಮಹಾತ್ಮಾ ಅಂತ ಕರಿತಾರೆ. ಅವರು ಏಕೆ ದೊಡ್ಡವರಾದರು ಅಂದ್ರೆ ಅವರದು ದೊಡ್ಡ ಮನಸ್ಸು ಅದಕ್ಕೆ ಅವರು ದೊಡ್ಡವರಾದರು.

ಯಾವುದೇ ಜಾತಿ ಧರ್ಮ ಇರಲಿ ಮಾಡಬೇಕಾದ ದೊಡ್ಡ ಕೆಲಸ ಅಂದ್ರೆ ಮಕ್ಕಳಿಗೆ ಶಿಕ್ಷಣ ನೀಡುವುದು. ಅದಕ್ಕಿಂತ ದೊಡ್ಡ ಧರ್ಮವೇ ಇಲ್ಲ. 

ಒಂದು ಮಗು ಬೆಳೆದು ಯಶಸ್ಸು ಪಡೆಯಬೇಕಾದರೆ ಮೂರು ವಿಷಯಗಳು ಮುಖ್ಯ.- ಪರಿಸರ, ಪ್ರೇರಣೆ, ಪ್ರಯತ್ನ.
ಪರಿಸರ ಚೆನ್ನಾಗಿರಬೇಕು.  ಜೊತೆಗೆ ಪ್ರೇರಣೆ ಪ್ರಯತ್ನ ಬೇಕು. ಇವು ಇದ್ರೆ ಉನ್ನತ ಸಾಧನೆ ಸಾಧ್ಯ.
 ಬೀಜ ಸಸಿಯಾಗಿ ಗಿಡವಾಗಿ ಬೆಳೆಯಲು ಒಳ್ಳೆಯ ಮಣ್ಣು ಗೊಬ್ಬರ ನೀರು ಚೆನ್ನಾಗಿರಬೇಕು ಆಗ ಸಸಿ ಗಿಡವಾಗುತ್ತೆ. 

ವಿದ್ಯಾರ್ಥಿಗಳು ಒಂದೇ ಶಾಲೆ ಒಂದೇ ಕ್ಲಾಸ್ ಅದೇ ವಿಷಯ ಓದಿರ್ತಾರೆ ಆದರೆ ಪರೀಕ್ಷೆಯಲ್ಲಿ ಕೆಲವರು ರ‌್ಯಾಂಕ್ ಬಂದ್ರೆ ಕೆಲವರು ಫೇಲ್ ಆಗಿರ್ತಾರೆ ಕಾರಣ ಪರಿಸರ ಚೆನ್ನಾಗಿದ್ದರೂ ಪ್ರೇರಣೆ ಬೇಕು.

ಬಿದಿರು ಕಟ್ಟಿಗೆ ಆಯುವವನ ಕೈಗೆ ಸಿಕ್ಕರೆ ಒಲೆಗೆ ಹೋಗಿ ಕರಕಲ ಆಗುತ್ತದೆ. ಅದು ಕೊಳಲು ಮಾಡುವವನ ಕೈಗೆ ಹೋದರೆ ದೇವರ ಕೈಗೆ ತಲುಪುತ್ತದೆ. ಅದಕ್ಕೆ ಹೇಳೋದು ಪರಿಸರ ಮುಖ್ಯ ಅಂತ.

ಯಾರಿಗೆ ತಂದೆ ತಾಯಿ ಹೀರೋ ಆಗಲ್ಲವೋ ಅವರ ಜೀವನ ಜೀರೋ. ನಮ್ಮ ತಂದೆ ತಾಯಿ ಶ್ರಮ ಅವರ ಬೆವರ ಹನಿ, ಅವರ ಜೀವನ ನಮಗೆ ಪ್ರೇರಣೆ ಆಗಬೇಕು. ಮಕ್ಕಳಿಗೆ ತಂದೆ ತಾಯಿ ಕೊಡಲಿಕ್ಕೆ ಸಾಧ್ಯ ಇರೋದು ಎರಡೇ. ಒಂದು ಶಿಕ್ಷಣ ಇನ್ನೊಂದು ಸಂಸ್ಕಾರ.

ಜೀವನದಲ್ಲಿ ಎಲ್ಲಕ್ಕಿಂತ ದೊಡ್ಡದು ಪ್ರಯತ್ನ. ಎಷ್ಟೇ ಸೋಲು ಆಗಲಿ ಪ್ರಯತ್ನ ಮಾಡಬೇಕು. ಜೀವನದ ನಿಜವಾದ ಸೌಂದರ್ಯ ಅಂದ್ರೆ ಬಿದ್ದವರು ಎದ್ದು ನಡೆಯೋದು ಓಡೋದು. ಕಷ್ಟ ಅಪಮಾನ ನೋವುಗಳ ಮಧ್ಯೆಯೂ ಸಾಧನೆ ಮಾಡಬೇಕು



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Dec 11 2025 8:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಗರಸಭೆ ಚುನಾವಣೆಗೆ ಜೆಡಿಎಸ್ ತಯಾರಿ ?
Dec 10 2025 7:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಂತರ್ಜಾತಿ ವಿವಾಹ : ಎಸ್ಪಿ ಮೊರೆ ಹೋದ ಯುವಕ
Dec 9 2025 8:31PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಣಕ್ಕೆ ಬೇಡಿಕೆ : ದೂರು FIR
Dec 8 2025 7:12AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿ 10 : ಬೆಳಗಾವಿಯಲ್ಲಿ ಮೌನ ಪ್ರತಿಭಟನೆ
Dec 8 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರುದ್ದ ಧರಣಿಗೆ 39 ದಿನ : ಭಾದಿತ ಗ್ರಾಮದ ಮಹಿಳೆಯರು ಭಾಗಿ
Dec 8 2025 1:28AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಿವೆಡ್ಡಿಂಗ್ ಶೂಟ್ ನಂತರ ಅಪಘಾತದಲ್ಲಿ ಜೋಡಿ ಸಾವು
Dec 7 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸದನದಲ್ಲಿ ಮಾತನಾಡಿ ಇಲ್ಲ ರಾಜೀನಾಮೆ ನೀಡಿ
Dec 6 2025 6:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬೆಳೆದದ್ದು ಕಾರ್ಖಾನೆಗಳಿಂದ ಅಲ್ಲ : ಶ್ರೀನಿವಾಸ ಗುಪ್ತಾ
Dec 6 2025 5:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು ಸಾಗಾಟದವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ
Dec 5 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಅಶೋಕ ಸರ್ಕಲ್ : ಹಣ ದುರುಪಯೋಗ ತನಿಖೆ ?




Copyright © 2025 Agni Divya. All Rights Reserved.
Designed & Developed by We Make Digitize