Advt. 
 Views   223

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

Oct 28, 2025, 04:33 PM IST
ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

ಕೊಪ್ಪಳ : ಜಿಲ್ಲೆಯಲ್ಲಿ ದುರಂತಗಳ ಸರಮಾಲೆ ಆರಂಭವಾಗಿದೆಯಾ ?

29 ವರ್ಷದ ವ್ಯಕ್ತಿ ರವಿವಾರ ರಾತ್ರಿ ತೋಟದ ಮನೆಯಲ್ಲಿ ತನಗೆ ತಾನೆ ಗುಂಡು ಹೊಡೆದುಕೊಂಡ ಘಟನೆ ಕುಕನೂರು ತಾಲೂಕು ಚಿಕ್ಕಬಿಡನಾಳನಲ್ಲಿ ಜರುಗಿತು.

ಮರುದಿನ ಸೋಮವಾರ ಕುಕನೂರು ತಾಲೂಕಿನ ಬೆಣಕಲ್ ನಲ್ಲಿ ತನ್ನ ಎರಡು ಮಕ್ಕಳನ್ನು ಸಾಯಿಸಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದುರಂತ ನಡೆಯಿತು.

ಇಂದು ಮಂಗಳವಾರ ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.‌ ಈ ಘಟನೆ ಕುಷ್ಟಗಿ ತಾಲೂಕಿನ ಹೊಮ್ಮಿನಾಳದಲ್ಲಿ ಜರುಗಿದೆ.
ಮೃತ ವಿದ್ಯಾರ್ಥಿಗಳನ್ನು 6 ನೇ ತರಗತಿ ವಿದ್ಯಾರ್ಥಿ ಹನುಮೇಶ ( 12) , 8 ನೇ ತರಗತಿ ವಿದ್ಯಾರ್ಥಿ ಯಮನೂರಪ್ಪ (14) ಎಂದು ಗುರುತಿಸಲಾಗಿದೆ.

ಇವರ ಜಮೀನು ಹತ್ತಿರ ಇರುವ ಕೆರೆಯಲ್ಲಿ ಈ ಇಬ್ಬರೂ ಈಜಲು ಹೋದಾಗ ಒಬ್ಬರ ಕಾಲು ಕೆರೆಯಲ್ಲಿ ಸಿಲುಕಿಕೊಂಡಿದೆ. ಆಗ ಇನ್ನೊಬ್ಬಾತ ಉಳಿಸಲು ಹೋಗಿ ಆತನೂ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. 



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Dec 11 2025 8:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಗರಸಭೆ ಚುನಾವಣೆಗೆ ಜೆಡಿಎಸ್ ತಯಾರಿ ?
Dec 10 2025 7:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಂತರ್ಜಾತಿ ವಿವಾಹ : ಎಸ್ಪಿ ಮೊರೆ ಹೋದ ಯುವಕ
Dec 9 2025 8:31PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಣಕ್ಕೆ ಬೇಡಿಕೆ : ದೂರು FIR
Dec 8 2025 7:12AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿ 10 : ಬೆಳಗಾವಿಯಲ್ಲಿ ಮೌನ ಪ್ರತಿಭಟನೆ
Dec 8 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರುದ್ದ ಧರಣಿಗೆ 39 ದಿನ : ಭಾದಿತ ಗ್ರಾಮದ ಮಹಿಳೆಯರು ಭಾಗಿ
Dec 8 2025 1:28AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಿವೆಡ್ಡಿಂಗ್ ಶೂಟ್ ನಂತರ ಅಪಘಾತದಲ್ಲಿ ಜೋಡಿ ಸಾವು
Dec 7 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸದನದಲ್ಲಿ ಮಾತನಾಡಿ ಇಲ್ಲ ರಾಜೀನಾಮೆ ನೀಡಿ
Dec 6 2025 6:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬೆಳೆದದ್ದು ಕಾರ್ಖಾನೆಗಳಿಂದ ಅಲ್ಲ : ಶ್ರೀನಿವಾಸ ಗುಪ್ತಾ
Dec 6 2025 5:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು ಸಾಗಾಟದವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ
Dec 5 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಅಶೋಕ ಸರ್ಕಲ್ : ಹಣ ದುರುಪಯೋಗ ತನಿಖೆ ?




Copyright © 2025 Agni Divya. All Rights Reserved.
Designed & Developed by We Make Digitize