Advt. 
 Views   547

ಕೊಪ್ಪಳ : ಕಾರ್ಖಾನೆ ಧೂಳಿಗೆ ಬೇಸತ್ತು ದಯಾಮರಣ ಬೇಡಿಕೆ

Mar 04, 2026, 11:36 PM IST
ಕೊಪ್ಪಳ : ಕಾರ್ಖಾನೆ ಧೂಳಿಗೆ ಬೇಸತ್ತು ದಯಾಮರಣ ಬೇಡಿಕೆ

ಕೊಪ್ಪಳ: ಕಾರ್ಖಾನೆಗಳ ಮಾಲಿನ್ಯದಿಂದ ಜನಜೀವನ ತತ್ತರಿಸಿರುವ ಕೆಲವು ಹಳ್ಳಿಗಳ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆ. 24 ರಂದು ನಡೆದ ಕೊಪ್ಪಳ ಭಾಗ್ಯನಗರ ಬಂದ್ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಬಳಿಕ ಶಾಸಕ ರಾಘವೇಂದ್ರ ಹಿಟ್ನಾಳ ಎಚ್ಚೆತ್ತುಕೊಂಡು ಇಂದು ಹಿರೇಬಗನಾಳ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ವಿಶೇಷವೆಂದರೆ ಅವರ ಜೊತೆ ಜಿಲ್ಲಾಧಿಕಾರಿಯವರೂ ಭೇಟಿ ನೀಡಿದರು.

ಈ ವೇಳೆ ಗ್ರಾಮಸ್ಥರು ಕಾರ್ಖಾನೆಗಳಿಂದ ಹೊರಬರುವ ಧೂಳಿನಿಂದ ಬದುಕು ಸಂಕಷ್ಟಕ್ಕೀಡಾಗಿದೆ ಎಂದು ದೂರಿದರು. ದಿನವೂ ಉಸಿರಾಟದ ತೊಂದರೆ ಹಾಗೂ ಅನಾರೋಗ್ಯದಿಂದ ನರಳುತ್ತಿದ್ದು, “ನಾವು ದಿನಾ ಸತ್ತು ಹುಟ್ಟಿ ಬದುಕುತ್ತಿದ್ದೇವೆ. ಹೀಗೆ ದಿನವೂ ಸಾಯುವುದಕ್ಕಿಂತ ಒಮ್ಮೆ ದಯಾಮರಣ ನೀಡಿಬಿಡಿ” ಎಂದು ಮಹಿಳೆ ಪಾರಮ್ಮ ಶಾಸಕ ಹಾಗೂ ಜಿಲ್ಲಾಧಿಕಾರಿಗಳ ಬಳಿ ಮನವಿ ಮಾಡಿಕೊಂಡರು.

ಇದು ಕಾರ್ಖಾನೆಗಳ ಮಾಲಿನ್ಯದಿಂದ ಗ್ರಾಮಸ್ಥರು ಎದುರಿಸುತ್ತಿರುವ ಸಂಕಷ್ಟದ ಕರಾಳ ಸ್ಥಿತಿಗೆ ಸಾಕ್ಷಿಯಂತಿತ್ತು.

ಗ್ರಾಮಸ್ಥರ ಪ್ರಕಾರ, ಮಕ್ಕಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸುತ್ತಿದ್ದು, ಕೆಲವರಿಗೆ ಪಾರ್ಶ್ವವಾಯು ಸಮಸ್ಯೆಯೂ ಕಾಡುತ್ತಿದೆ. ಹೊಲಗಳು ಹಾಳಾಗಿ ಬೆಳೆ ಬರುವುದಿಲ್ಲ. ಕೃಷಿಯನ್ನು ನಂಬಿದ್ದ ಬದುಕು ಸಂಪೂರ್ಣ ಸಂಕಷ್ಟಕ್ಕೀಡಾಗಿದೆ. ಜಾನುವಾರುಗಳಿಗೂ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ.

“ನಾವು ದಿನವೂ ಆಸ್ಪತ್ರೆಗೆ ಹೋಗಿ ಬರುವುದೇ ಕೆಲಸವಾಗಿದೆ. ದಯವಿಟ್ಟು ನಮ್ಮ ಸಂಕಷ್ಟಕ್ಕೆ ಪರಿಹಾರ ನೀಡಿ, ಇಲ್ಲವಾದರೆ ದಯಾಮರಣ ನೀಡಿಬಿಡಿ” ಎಂದು ಗ್ರಾಮಸ್ಥರು ಅಳಲ ವ್ಯಕ್ತಪಡಿಸಿದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


May 17 2026 8:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಿಲ್ಲಾ ಮಂತ್ರಿ ಆರೋಗ್ಯ ಮಂತ್ರಿ ಬೆಂಗಳೂರಿಗೆ ಸೀಮಿತ
May 16 2026 7:27PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮಳೆ ಬಿರುಗಾಳಿಗೆ ಬಾಳೆತೋಟಗಳಿಗೆ ಅಪಾರ ಹಾನಿ
May 15 2026 7:19AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹುಲಿಗೆಮ್ಮ ಜಾತ್ರೆಯ ಟ್ರಾಕ್ಟರ್ ನದಿಗೆ : ಮಗು ಸೇರಿ 6 ಸಾವು
May 14 2026 9:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ನೀಟ್ ರದ್ದು ಮಾಡಿ ರಾಜ್ಯಗಳಿಗೆ ಅಧಿಕಾರ ನೀಡಿ
May 13 2026 8:15AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮೋದಿ ಬೈದರೆ ದೊಡ್ಡವರಾಗ್ತೀವಿ ಅನ್ನೋ ಭ್ರಮೆ : ಹಿಟ್ನಾಳಗೆ ಬಿಜೆಪಿ ಕೌಂಟರ್
May 12 2026 6:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗ ಪ್ರದರ್ಶನಕ್ಕೆ ಇರುತ್ತಿದ್ದ ಮಿಯಾ ಜಾಕಿ ಈಗ ಮಾರಾಟಕ್ಕೆ !
May 11 2026 8:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಭಕ್ತಿ ಸಂಭ್ರಮದಲ್ಲಿ ಜರುಗಿದ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ
May 11 2026 7:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರೋಧಿ ಧರಣಿ 193ನೇ ದಿನಕ್ಕೆ : ಕೆರೆ ಲೀಸ್ ವಿವಾದ ಚರ್ಚೆ
May 11 2026 3:16AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಂಜನಾದ್ರಿಗೆ ಅರ್ಪಿಸಿದ ಆಭರಣದಲ್ಲಿ ಚಿನ್ನಲೇಪಿತ ತಾಮ್ರ ?
May 10 2026 9:13AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸುರೇಶ್ ಡಿ ನೂತನ ಪೊಲೀಸ್ ಇನ್ಸಪೆಕ್ಟರ್




Copyright © 2026 Agni Divya. All Rights Reserved.
Designed & Developed by We Make Digitize